Accident news Accident board on road

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

ಮಂಗಳೂರು: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕ ಹೃದಯಾಘಾತದಿಂದ (Heart attack) ಸಾವನ್ನಪ್ಪಿದ್ದಾನೆ. ಈ ವೇಳೆ ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನ ಮತ್ತೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಸಂಭವಿಸಿದೆ.

ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಹೃದಯಾಘಾತದಿಂದ (Heart attack) ಮೃತಪಟ್ಟ ರಿಕ್ಷಾ ಚಾಲಕ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಜೀದ್ ಮಂಗಳವಾರ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಕೆಯನ್ನು ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರು ಎನ್ನಲಾಗಿದೆ.

ಇದನ್ನೂ‌ ಓದಿ: Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು, ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನು ಅಗಲಿದ್ದಾರೆ.

ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ