Let's build the country together: MLA Vijayananda

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

ಹುನಗುಂದ: ದೇಶದ ಪರಂಪರೆ ಸಿದ್ಧಾಂತದಲ್ಲಿ ರಾಷ್ಟ್ರ ಪಿತಾಮಹ ಮಹಾತ್ಮ ಗಾಂಧಿಯವರು ಹೇಳಿದ ಮಾತಿನಂತೆ ದೇಶಕ್ಕೆ ಪವಿತ್ರವಾದ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ ಅವರ ಸಂವಿಧಾನದ ಅಡಿಯಲ್ಲಿ ಭಾರತ ದೇಶವು ಪ್ರಜಾತತ್ವ ಮತ್ತು ಜ್ಯಾತ್ಯಾತೀತ ತಳಹದಿಯಲ್ಲಿ ನಡೆದು, ಈ ದೇಶವನ್ನು ಒಗ್ಗಟ್ಟಾಗಿ ಕಟ್ಟಿ ಮುನ್ನೆಡಿಸೋಣ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಟಿಸಿಎಚ್ ಕಾಲೇಜು ಆವರಣದಲ್ಲಿ ತಾಲೂಕ ಆಡಳಿತ ಗುರವಾರ ಹಮ್ಮಿಕೊಂಡ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸ್ವತಂತ್ರ ದಿನವು ಪ್ರತಿಯೋಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಅವರು ಇಂದು ಸ್ವಾತಂತ್ರ ಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ ತ್ಯಾಗ, ಹೋರಾಟ, ಬಲಿದಾನವನ್ನು ಸ್ಮರಿಸುವ ದಿನವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ತಹಸೀಲ್ದಾರಗ ನಿಂಗಪ್ಪ ಬಿರಾದರ ದ್ವಜಾರೋಹನ ನೇರವೇರಿಸಿ ಮಾತನಾಡಿದ ಅವರು, ಬ್ರೀಟಿಷರ ಕಪಿಮುಷ್ಟಿಯಲ್ಲಿದ್ದ ಭಾರತ ಸ್ವಾತಂತ್ರ್ಯ ಪಡೆಯಲು ಹಲವಾರು ಮಹಾತ್ಮರ ತ್ಯಾಗ ಬಲಿದಾನವೇ ಕಾರಣ ಅವರ ತಂದು ಕೊಟ್ಟ ಸ್ವಾತಂತ್ರ್ಯ ಕ್ಕೆ ಇಂದು 78 ನೇ ವರ್ಷದ ಸ್ವಾತಂತ್ರ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕವನ್ನು ಪಡೆದ ವಿದ್ಯಾರ್ಥಿಗಳಿಗೆ ತಾಲೂಕಾ ಆಡಳಿತದಿಂದ ಸನ್ಮಾನಿಸಲಾಯಿತು.

ಪಿಎಸ್‌ಐ ಚನ್ನಯ್ಯ ದೇವೂರ ನೇತೃತ್ವದಲ್ಲಿ ಪೋಲಿಸರು ಮತ್ತು ವಿವಿಧ ಶಾಲಾ ಕಾಲೇಜು ಎಸ್ ಸಿಸಿ ಮತ್ತು ಎನ್ ಎಸ್ ಎಸ್ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪರೇಡ್ ಮೂಲಕ ಧ್ವಜ ವಂದನೆಯನ್ನು ಸಲ್ಲಿಸಿದರು.

ತಾಲೂಕಾ ಭೂನ್ಯಾಯ ಮಂಡಳಿಯ ಸದಸ್ಯರಾದ ಅಮರೇಶ ನಾಗೂರ, ಮಹಾಂತೇಶ ಅವಾರಿ, ಸಂಗಣ್ಣ ಗಂಜೀಹಾಳ ಪೋಲಿಸ್ ಉಪಾಧೀಕ್ಷಕ ವಿಶ್ವನಾಥರಾವ ಕುಲಕರ್ಣಿ, ಸಿಪಿಐ ಸುನೀಲ ಸವದಿ, ತಾಪಂ ಇಒ ಮುರಳೀಧರ ದೇಶಪಾಂಡೆ, ಬಿಇಒ ಜಾಸ್ಮೀನ ಕಿಲ್ಲೇದಾರ, ಕ್ಷೇತ್ರ ಸಮನ್ವಯಧಿಕಾರಿ ಸದಾಶಿವ ಗುಡಗುಂಟಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಹಿಂದೂಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಸಂಗಮೇಶ ಗಡೇದ, ಲೋಕೋಪಯೋಗಿ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ ಹೂಲಗೇರಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣವರ, ಕೆಡಿಪಿ ಸದಸ್ಯರಾದ ವಿಜಯಮಹಾಂತೇಶ ಗದ್ದನಕೇರಿ, ವಿ.ಮ.ಬ್ಯಾಂಕ್ ಅಧ್ಯಕ್ಷ ಶಿವಾನಂದ ಕಂಠಿ, ಪುರಸಭೆಯ ಸದಸ್ಯರಾದ ಚಂದ್ರು ತಳವಾರ, ಬಸವರಾಜ ಗೋಣ್ಣಾಗರ, ಶಾಂತಾ ಮೇಲಿನಮನಿ ಭಾಗ್ಯಶ್ರೀ ರೇವಡಿ,ಕಮಲವ್ವ ಸಂದಿಮನಿ, ಮಾರುತಿ ಹುನಗುಂದ, ರಾಜು ಹುನಗುಂದ, ಗುರಲಿಂಗಪ್ಪ ಇಂಗಳಗೇರಿ, ಮಲ್ಲಪ್ಪ ಅಠರದಾನಿ, ಮಹಾಂತಪ್ಪ ಪಲ್ಲೇದ, ಯಮನಪ್ಪ, ಬೆಣ್ಣಿ, ವೀರುಪಾಕ್ಷಿ ಬೀಳಗಿ,ಚೇತನ ಮುಕ್ಕಣ್ಣನವರ, ವಿನೋದ ಭೋವಿ ಸೇರಿದಂತೆ ಇತರರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ