Rehabilitation Campaing One child labor protected by officers in narayanapur

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು.

Join Our telegram: https://t.me/dcgkannada

ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶಿವರಾಜ್ ಜಮಾದಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಒಂದು ಮಗುವನ್ನು ಬಾಲ ಕಾರ್ಮಿಕ‌ ಪದ್ಧತಿಯಿಂದ‌ ರಕ್ಷಿಸಲಾಯಿತು.

Latest News

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025 ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್

ತೆರವಿಗೆ ಗಡುವು-ಹೋರಾಟ ಅಂತ್ಯ :                                       ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ತೆರವಿಗೆ ಗಡುವು-ಹೋರಾಟ ಅಂತ್ಯ : ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಿಸಿ ಅಂಗಡಿ ಹಾಕಿಕೊಂಡಿದ್ದನ್ನು

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ:  ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಸಂಘದ ಸನ್ 2025-28 ನೇ

ಬಿಎಎಸ್ ಇಂಟರ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟ ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ

ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯವರು ಸನ್ಮಾನಿಸಿ ಶುಭಹಾರೈಸಿದರು. ಮುದ್ದೇಬಿಹಾಳ: ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಶಾರದಳ್ಳಿ, ವಿಕ್ರಾಂತ ಶಾರದಳ್ಳಿ ಕ್ರೀಡಾಪಟುಗಳನ್ನು ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು

ಮುದ್ದೇಬಿಹಾಳ : ಡಿ.24 ರಂದು ಹೆಸ್ಕಾಂ ಸಲಹಾ ಸಮೀತಿ ಸಭೆ

ಮುದ್ದೇಬಿಹಾಳ : ಡಿ.24 ರಂದು ಹೆಸ್ಕಾಂ ಸಲಹಾ ಸಮೀತಿ ಸಭೆ

ಮುದ್ದೇಬಿಹಾಳ : ಹೆಸ್ಕಾಂ ವ್ಯಾಪ್ತಿಯಲ್ಲಿ ಗ್ರಾಹಕರು ,ರೈತರು ಸಾರ್ವಜನಿಕರು ವಿದ್ಯುತ್ ಸಂಬAಧಿತ ಸಮಸ್ಯೆಗಳಿದ್ದಲ್ಲಿ ಡಿ.24 ರಂದು ಮದ್ಯಾಹ್ನ 3ಗಂಟೆಗೆ ಮುದ್ದೇಬಿಹಾಳ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ನಡೆಯಲಿರುವ ಸಲಹಾ ಸಮೀತಿ ಸಭೆಯಲ್ಲಿ ತಿಳಿಸಬಹುದಾಗಿದೆ ಎಂದು ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.