Tungabhadra dam: Installation of first stop log gate

Tungabhadra dam: ಒಂದನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ‌.. ಸಂಭ್ರಮಾಚರಣೆಯಲ್ಲಿ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭಾಗಿ‌

Tungabhadra dam: ಒಂದನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ‌.. ಸಂಭ್ರಮಾಚರಣೆಯಲ್ಲಿ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭಾಗಿ‌

ಕೊಪ್ಪಳ: ತುಂಗಭದ್ರಾ ಜಲಾಶಯದ (Tungabhadra dam) 19ನೇ ಕ್ರಸ್ಟ್ ಗೇಟ್ ನೀರಿನಲ್ಲಿ ಕೊಚ್ಚಿ ಹೋದ ಹಲವು ದಿನಗಳ ಬಳಿಕ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಮೊದಲ ಹಂತದ ಯಶಸ್ಸು ಸಿಕ್ಕಿದೆ.

ಹೌದು, ಗೇಟ್ ಡಿಸೈನ್ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಆಪರೇಷನ್ ತುಂಗಭದ್ರಾ ಡ್ಯಾಂನ ಒಂದನೇ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗಿದೆ. ಒಂದನೇ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು, ಮತ್ತೊಂದು ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ತಿಲಿದು ಬಂದಿದೆ.

ಎರಡು ದಿನಗಳ ಶ್ರಮದಿಂದ ಮೊದಲ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾದ ಹಿನ್ನೆಲೆ ತುಂಗಭದ್ರಾ ಜಲಾಶಯದ ಮೇಲೆ ಸಂಭ್ರಮಾಚರಣೆ ನಡೆಸಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್ ಮೊದಲಾದವರಿದ್ದರು. ಉಳಿದ ಎಲಿಮೆಂಟ್ ಗಳನ್ನು ಅಳವಡಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

Tungabhadra dam: ಕಟ್ ಆದ ಗೇಟ್ ಚೈನ್ ಅಳವಡಿಸುವಾಗ ಅವಘಡ!

ಕೊಪ್ಪಳ: ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಲಿಂಕ್ ಕಟ್ ಆಗಿ ನೀರಿನಲ್ಲಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಗೇಟ್ ಅಳವಡಿಕೆ ಕಾರ್ಯ ನಡೆದಿದ್ದು, ಅಚಾರ್ತುವೊಂದು ಸಂಭವಿಸಿತ್ತು.

ಹೌದು, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತುಂಗಭದ್ರಾ ಡ್ಯಾಂ ಬಳಿ ಗೇಟ್ ಅಳವಡಿಕೆ ನಡೆಸಲಾಗುತ್ತಿದೆ. ತಜ್ಞರು ಹಾಗೂ ಸಿಬ್ಬಂದಿ ಟ್ರಕ್ ಮೂಲಕವಾಗಿ ಟಿಬಿ ಡ್ಯಾಂ ಬಳಿ ಬೃಹತ್ ಗೇಟ್ ಸಾಗಿಸುವಾಗ ಅವಘಡ ಸಂಭವಿಸಿತ್ತು.

ಟ್ರಕ್ ನಿಂದ ಗೇಟ್ ಇಳಿಸುತ್ತಿದ್ದ ವೇಳೆ ಏಕಾಏಕಿ ಬ್ಯಾಲೆನ್ಸ್ ತಪ್ಪಿದೆ. ಗೇಟ್ ಅನ್ನು ಡ್ಯಾಂನ ಮೇಲ್ಭಾಗಕ್ಕೆ ಬೆಲ್ಟ್ ಕಟ್ಟಿ ಎತ್ತುವಾಗ ಒಮ್ಮೆಲೆ ಬ್ಯಾಲೆನ್ಸ್ ತಪ್ಪಿದೆ. ಬಳಿಕ ಸಿಬ್ಬಂದಿ ನಿಧಾನವಾಗಿ ಗೇಟ್ ಇಳಿಸಿದ್ದಾರೆ‌. ಯಾವುದೇ ಅಪಾಯ ಸಂಭವಿಸಿಲ್ಲ.

ಟಿಬಿ ಡ್ಯಾಂಗೆ ಗೇಟ್ ಅಳವಡಿಸುವುದೇ ಒಂದು ದೊಡ್ಡ ಚಾಲೇಂಜ್. ಇನ್ನು, ಮೂರು ದಿನಗಳಲ್ಲಿ ಶುಭ ಸುದ್ದಿ ಕೊಡುತ್ತೇವೆ ಎಂದು ತಜ್ಞರು ತಿಳಿಸಿದ್ದರು. ಈಗ ಮೊದಲು ಗೇಟ್ ಅಳವಡಿಸಿದ್ದು, ಶೀರ್ಘದಲ್ಲಿಯೇ ಪೂರ್ಣ ಪ್ರಮಾಣದಲ್ಲ ಕಾಮಗಾರಿ ನಡೆಸಲಾಗುವುದು ಎಂದು ವರದಿಯಾಗಿದೆ.

Latest News

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ ನೂತನ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡು ಸೋಮವಾರ ಅಧಿಕಾರ ಸ್ವೀಕರಿಸಿದ ಅಶೋಕಕುಮಾರ ಭೋವಿ ಅವರನ್ನು ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಸದಸ್ಯ ಬಂದೇನವಾಜ್ ಕುಮಸಿ, ಮುಖ್ಯಗುರು ಅನೀಲಕುಮಾರ ರಾಠೋಡ, ಎಚ್.ಆರ್. ಬಾಗವಾನ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ ಮಾತನಾಡಿ, ಸಾರ್ವಜನಿಕ ಸಾರಿಗೆ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯಿಂದ ಜಿಒಸಿಸಿ ಬ್ಯಾಂಕ್ ಅಧ್ಯಕ್ಷ ಆನಂದಗೌಡ ಎನ್ ಬಿರಾದಾರ ಭಾನುವಾರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಕಚೇರಿಯಲ್ಲಿ ಭಾನುವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಆನಂದಗೌಡರ ಪ್ರತಿಸ್ಪರ್ಧಿ ಮೈಸೂರಿನ ಮಂಜೇಗೌಡ ಒಂದೂ ಮತಗಳನ್ನು ಪಡೆದುಕೊಳ್ಳದೇ ಠೇವಣಿ ನಷ್ಟ ಕಳೆದುಕೊಂಡರಲ್ಲದೇ