Muda case CM Siddaramaiah vs BY Vijayendra

Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮೈಸೂರು ಮುಡಾ (Muda case) ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

Join Our Telegram: https://t.me/dcgkannada

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದು, “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

Muda case: ಕರ್ನಾಟಕಕ್ಕೆ ಬಂದ AICC ಅಧ್ಯಕ್ಷ ಖರ್ಗೆ.. ಸಿಎಂ ಸಿದ್ದು ಬೆನ್ನಿಗೆ ನಿಲ್ಲುತ್ತಾರಾ?

ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ (Muda case) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ‌ ಅವರ ಬೆನ್ನಿಗೆ ನಿಂತಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda case) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಡುವೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ.

ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ ಎಂದಿದ್ದಾರೆ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲೂ ಸೂಚಿಸಿದ್ದಾರೆ ಎನ್ನಲಾಗಿದೆ.

ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ದೂರದಾರ ಟಿ.ಜೆ. ಅಬ್ರಾಹಂಗೆ ರಾಜ್ಯಪಾಲರ ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಾಹಂ ಮತ್ತಷ್ಟು ದಾಖಲೆಗಳನ್ನು ತೆಗೆದುಕೊಂಡು ರಾಜ್ಯಪಾಲರ ಕಚೇರಿ ತಲುಪಲಿದ್ದಾರೆ ಎಂದು ತಿಳಿದು ಬಂದಿದೆ.

Latest News

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ ನೂತನ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡು ಸೋಮವಾರ ಅಧಿಕಾರ ಸ್ವೀಕರಿಸಿದ ಅಶೋಕಕುಮಾರ ಭೋವಿ ಅವರನ್ನು ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಸದಸ್ಯ ಬಂದೇನವಾಜ್ ಕುಮಸಿ, ಮುಖ್ಯಗುರು ಅನೀಲಕುಮಾರ ರಾಠೋಡ, ಎಚ್.ಆರ್. ಬಾಗವಾನ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ ಮಾತನಾಡಿ, ಸಾರ್ವಜನಿಕ ಸಾರಿಗೆ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯಿಂದ ಜಿಒಸಿಸಿ ಬ್ಯಾಂಕ್ ಅಧ್ಯಕ್ಷ ಆನಂದಗೌಡ ಎನ್ ಬಿರಾದಾರ ಭಾನುವಾರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಕಚೇರಿಯಲ್ಲಿ ಭಾನುವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಆನಂದಗೌಡರ ಪ್ರತಿಸ್ಪರ್ಧಿ ಮೈಸೂರಿನ ಮಂಜೇಗೌಡ ಒಂದೂ ಮತಗಳನ್ನು ಪಡೆದುಕೊಳ್ಳದೇ ಠೇವಣಿ ನಷ್ಟ ಕಳೆದುಕೊಂಡರಲ್ಲದೇ