MB Patil with CM Siddaramaiah in muda case

Muda case: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: MB Patil

Muda case: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: MB Patil

ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ (MB Patil) ಕಿಡಿಕಾರಿದ್ದಾರೆ.

ಶನಿವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟೀಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ’ ಎಂದರು.

Join Our Telegram: https://t.me/dcgkannada

ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ‌ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು,‌ ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ ಎಂದು MB Patil ಆರೋಪಿಸಿದರು.

ಕೇಂದ್ರದ ಬಿಜೆಪಿ ಸರಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ ಎಂದು ಅವರು ಟೀಕಿಸಿದರು.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ ಎಂದು ಅವರು ಪ್ರತಿಪಾದಿಸಿದರು.

Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮೈಸೂರು ಮುಡಾ (Muda case) ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದು, “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು.

ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ