Viral news Garbage sweeper has crores of property in uttarapradesh

Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಜಿಲ್ಲೆಯ ನೈರ್ಮಲ್ಯ ಕಾರ್ಮಿಕ ಸಂತೋಷ್ ಜೈಸ್ವಾಲ್ ಎಂಬುವವರ ಬಳಿ ಕೋಟಿ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದ್ದು, ಈತನ ಸುದ್ದಿ ವೈರಲ್ (Viral news) ಆಗಿದೆ.

ಜೈಸ್ವಾಲ್ ನಕಲಿ ದಾಖಲೆಯೊಂದಿಗೆ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾನೆ. ಅಲ್ಲದೇ, ಆತನ ಬಳಿ ಇನ್ನು ಅನೇಕ ಐಷಾರಾಮಿ ಕಾರುಗಳು ಇವೆಯಂತೆ. ಇಂತಹ ಸ್ವತ್ತು ಹೊಂದಿರುವ ಈತ ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ.

Join Our Telegram: https://t.me/dcgkannada

ಜೈಸ್ವಾಲ್ ಮೊದಲು ನಜೀರ್ ಎಂಬ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾನೆ. ಈತ ತನ್ನ ಆಸ್ತಿಗೆ ಸಂಬಂಧಪಟ್ಟ ಫೈಲ್‌ಗಳನ್ನು ತಿರುಚಿದ್ದಾನೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆಗಿನ ಆಯುಕ್ತ ಯೋಗೇಶ್ವ‌ರ್ ರಾಮ್ ಮಿಶ್ರಾ ತನಿಖೆ ನಡೆಸಿದ್ದರು. ತನಿಖೆಯ ವರದಿ ಈಗ ಬಹಿರಂಗವಾದ ಕಾರಣ ಆತನನ್ನು ಅಮಾನತುಗೊಳಿಸಲಾಯಿತು. ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಸಂತೋಷ್ ಜೈಸ್ವಾಲ್ ಸ್ವಿಫ್ಟ್ ಡಿಜೈರ್, ಎರ್ಟಿಗಾ ಮಾರುತಿ ಸುಜುಕಿ, ಮಹೀಂದ್ರಾ ಸ್ಕಾರ್ಪಿಯೋ, ಇನ್ನೋವಾ ಮತ್ತು ಮಹೀಂದ್ರಾ ಕೈಲೋ ಹೊಂದಿದ್ದಾನೆ. ಇತ್ತ, ಅವರ ಸಹೋದರ ಉಮಾಶಂಕ‌ರ್ ಜೈಸ್ವಾಲ್ ಎರ್ಟಿಗಾ ಮಾರುತಿ ಸುಜುಕಿ ಮತ್ತು ಅವರ ಪತ್ನಿ ಬೇಬಿ ಜೈಸ್ವಾಲ್‌ ಟೊಯೋಟಾ ಇನ್ನೋವಾ ಹೊಂದಿದ್ದಾರೆ.

ಇದನ್ನೂ ಓದಿ: Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುವಾಗ ಜೈಸ್ವಾಲ್ ಕಡಿಮೆ ವೇತನದೊಂದಿಗೆ ಹೇಗೆ ಅಕ್ರಮವಾಗಿ ಕೋಟಿ ಕೋಟಿ ಆಸ್ತಿಯನ್ನು ಸಂಪಾದಿಸಿದ್ದಾನೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. (Viral news)

ರಾಜ್ಯಪಾಲರ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ : ಡಿಕೆಶಿ

ಬೆಂಗಳೂರು : ರಾಜ್ಯಪಾಲರು ವಿವಾದವೇ ಅಲ್ಲದ ವಿಚಾರವನ್ನು ವಿವಾದ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ರಾಜ್ಯಪಾಲರ ನಡೆಯನ್ನು ಖಂಡಿಸಿ ಪಕ್ಷವು ರಾಷ್ಟ್ರಪತಿಗೆ ಮನವಿಯನ್ನು ಸಲ್ಲಿಸಲಿದೆ. ಯಾವುದೇ ದಾಂದಲೆ ಇಲ್ಲದೆ ಶಾಂತಿಯುತವಾಗಿ ಎಚ್ಚರಿಕೆಯಿಂದ ಪ್ರತಿಭಟನೆ ನಡೆಸಲಾಗುವುದು. ಗಾಂಧಿ ಪ್ರತಿಪಾದಿಸಿದ ಶಾಂತಿ ಮಾರ್ಗದಲ್ಲಿ ಪ್ರತಿಭಟನೆ ನಡೆಸಿ ದೇಶಕ್ಕೆ ಸಂದೇಶ ನೀಡುವುದಾಗಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ರಾಜ್ಯಪಾಲರು ತೀರ್ಮಾನ ಸರಿಯಾಗಿ ಮಾಡಿಲ್ಲ. ಸಚಿವ ಸಂಪುಟ, ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದೆ. ಹಿಂದಿನ ಸಂಪುಟ ಸಭೆಯಲ್ಲ ನಾವು ಕೈಗೊಂಡ ನಿರ್ಣಯವನ್ನು ರಾಜ್ಯಪಾಲರು ಸ್ವೀಕರಿಸಿಲ್ಲ. ರಾಜಭವನವನ್ನು ದುರಪಯೋಗ ಮಾಡಿ ನಿರ್ಧಾರ ಹೊರಡಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದರು.

Latest News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.