Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ