Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.