Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Ad
Ad

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Ad
Ad

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500