Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ (ಪುಣೆ ತಾಲೀಮು) ರಿಯಾಜ ಮುಳಕೋಟೆ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಪಂದ್ಯಾವಳಿಯಲ್ಲಿ ಒಟ್ಟು 30 ಜೋಡಿ ಕುಸ್ತಿ ಪಟುಗಳು ರಾಜ್ಯದ ವಿವಿಧ ಕಡೆಯಿಂದ ಪಾಲ್ಗೊಂಡಿದ್ದರು. ಬಳಬಟ್ಟಿ ಗ್ರಾಮದ ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ ಹಾಗೂ ಯಮನಪ್ಪ ಮಾಳಗೊಂಡ ಇವರ ನೇತೃತ್ವದಲ್ಲಿ ಭರ್ಜರಿಯಾಗಿ ಕುಸ್ತಿ ಪಂದ್ಯಗಳು ನಡೆದವು. ಒನ್ ನಂಬರ ಕುಸ್ತಿ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ ಅಶೋಕ ಪಿ.ಮಣಿ ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಬಾಪುಗೌಡ ಪಿ.ಪಾಟೀಲ್,ಉಪಾಧ್ಯಕ್ಷರಾಗಿ ಸದಾಶಿವ ಮಾಗಿ,ಪ್ರಧಾನ ಕಾರ್ಯದರ್ಶಿಗಳಾಗಿ ಎಸ.ಎ.ಬೇವಿನಗಿಡದ,ಖಜಾಂಚಿಯಾಗಿ ಬಿ.ಎಚ್.ಬಳಬಟ್ಟಿ,ಜಂಟಿ ಕಾರ್ಯದರ್ಶಿ ಡಿ.ಬಿ.ಓಲೇಕಾರ,ಯು.ಕೆ.ಬಾಗವಾನ,ಸಂಘಟನಾ ಕಾರ್ಯದರ್ಶಿಗಳಾಗಿ