Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ