Death news: Progressive thinker Prof. Mahesh Chandraguru is no more

Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮೈಸೂರು: ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ ಆದ ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು (68) ಅವರು ನಿಧನ (Death news) ಹೊಂದಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರಗುರು ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಹಲೋಕ ತ್ಯಜಿಸಿದ್ದಾರೆ.

ಗ್ಯಾಂಗ್ರೀನ್​​ನಿಂದ ಗುಣಮುಖರಾಗಿದ್ದ ಅವರನ್ನು‌ ಎರಡು ವಾರಗಳ ಹಿಂದೆ ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಶನಿವಾರ ರಾತ್ರಿ 7:15ಕ್ಕೆ ವಿಜಯನಗರದ ಎರಡನೇ ಹಂತದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರು (Death News) ಎಳೆದಿದ್ದಾರೆ.

Join Our Telegram: https://t.me/dcgkannada

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವರಾದ ಮಹೇಶ್ ಚಂದ್ರಗುರು 80ರ ದಶಕದಲ್ಲಿ ಹೈದರಾಬಾದ್​​ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಆ ಬಳಿಕ ಬಳಿಕ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಪ್ರಗತಿಪರ ಹಾಗೂ ವೈಚಾರಿಕ ಚಿಂತನೆಗಳನ್ನು ಬಿತ್ತುತ್ತಿದ್ದರು.

ಪ್ರೊ.ಮಹೇಶ್‌ ಚಂದ್ರ ಗುರು ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ನಾಡಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು.

ಇದನ್ನೂ ಓದಿ: Shocking Video: ಕಿರುಕುಳದಿಂದ ಬೇಸತ್ತ ಬಾಲಕಿ.. ಕುತ್ತಿಗೆಗೆ ಚಾಕುವಿನಿಂದ ಹಿರಿದುಕೊಂಡು ಆತ್ಮಹತ್ಯೆಗೆ ಯತ್ನ..! (ವೈರಲ್ ವಿಡಿಯೋ ನೋಡಿ)

ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ಹೇಳಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ