V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ