ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ ಎಂಬ ಮಾಹಿತಿ ಮೇಲೆ ನಾನು ಸ್ಥಳಕ್ಕೆ ಹೋದೆ. ನಾವು ಹೋಗುವದಕ್ಕೆ ಮುನ್ನವೇ ಮಾಧ್ಯಮ ಹಾಗೂ ಹೊಯ್ಸಳ ಪೊಲೀಸರು ಇದ್ದರು. ಈ ವೇಳೆ ನಾವು ಮಾಂಸವನ್ನು ಸೀಜ್ ಮಾಡಲು ಹೇಳಿದೆವು. ಆಗ ಅವರು ನಾವು ಸೀಜ್ ಮಾಡಲು ಆಗಲ್ಲ 112ಗೆ ಕರೆ ಮಾಡಲು ತಿಳಿಸಿದರು. ಅದರಂತೆ ನಾವು 112ಗೆ ಕಾಲ್ ಮಾಡಿದೆವು. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ವೇಳೆ ಅಬ್ದುಲ್ ರಜಾಕ್ ಏಕಾಏಕಿ 5-6 ಜನರನ್ನು ಕರೆದುಕೊಂಡು ಬಂದಿದ್ದಾರೆ. ಅಲ್ಲಿಯವರೆಗೂ ಯಾವುದೇ ಗಲಾಟೆ ನಡೆದಿರಲಿಲ್ಲ ಎಂದರು.

ಅಬ್ದುಲ್ ರಜಾಕ್ ಬಂದು ಈ ಮಾಂಸ ನಮ್ಮದು. ಇದನ್ನು ಓಪನ್ ಮಾಡಲು ಬಿಡಲ್ಲ ಎಂದು ಹಠಕ್ಕೆ ಬಿದ್ದರು. ಇಷ್ಟೆಲ್ಲಾ ಆದ ಬಳಿಕ ನಾನು ಪೆನ್‌ಡ್ರೈವ್ ನನ್ನ ಬಳಿ ಇದೆ ಅದರಲ್ಲಿ ಎಲ್ಲಾ ದಾಖಲೆಗಳು ಇವೆ ಎಂದು ಬಹಿರಂಗವಾಗಿ ಹೇಳಿದೆ. ಹೀಗೆ ಹೇಳುತ್ತಿದ್ದಂತೆಯೇ ಪೊಲೀಸರು ನನ್ನನ್ನು ಅವರ ವಾಹನಕ್ಕೆ ದಬ್ಬಿದ್ರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ಮಳೆಯಲ್ಲಿ ನೆನೆದು, ಮೊದಲೇ ನೋವಿದ್ದರಿಂದ ಕಾಲು ಮರಗಟ್ಟಿತ್ತು. ಹೀಗಾಗಿ ನನಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ನನ್ನಿಂದ ನಡೆಯೋಕೆ ಆಗಲ್ಲ ಅಂದಾಗ ನಾಟಕ ಆಡೋಡ ಸೂ*** ಮಗನೇ ಹೇಳಿ ಎಳೆದುಕೊಂಡು ಠಾಣೆಯೊಳಗಿರುವ ಎಂದರು.

ನಂತರ ಎದ್ದೇಳು ಮೇಲೆ ಅಂದ್ರು. ಆಗ ನಾನು ಕಾಲು ನೋವಿದೆ ಎಂದು ಹೇಳಿಕೊಂಡರೂ‌ಬಿಡದೇ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಟಾರ್ಚರ್ ಕೊಟ್ಟರು. ಇದಾದ ಬಳಿಕ ಎಸಿಪಿ ಚಂದನ್ ಅವರು ಬಂದು ಏನ್ರಿ ಅವನನ್ನು‌ ಮಲಗಿಸಿದ್ದೀರಾ..? ಬೋ** ಮಗನನ್ನು ಎಬ್ಬಿಸಿ ಎಂದು ಹೇಳಿದರು.

ಆಗ ನಾನು ಎದ್ದೇಳಲು ಆಗ್ತಿಲ್ಲ ಅಂದಾಗ ನನಗೆ ಗೊತ್ತು ಹೇಗೆ ಎದ್ದೇಳಿಸಬೇಕು ಅಂದು ಲಾಠಿಯಿಂದ 8 ಬಾರಿ ಹೊಡೆದಿದ್ದಾರೆ. ಬಳಿಕ ನನ್ನ ಜುಟ್ಟು ಹಿಡಿದು ಸಂಪೂರ್ಣವಾಗಿ ಬೆತ್ತಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್