Heart attack: Heart attack during press conference for CM.. Man died on the spot in bengaluru press club

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ.

ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ.

ಕೂಡಲೇ ಹೃದಯಾಘಾತಕ್ಕೀಡಾದ (Heart attack) ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ  ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ