ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ ‘ಚಿನ್ನದ ಪದಕ’ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ ‘ಗೋಲ್ಡ್ ಮೆಡಲ್’ ನ ಸಾಧನೆ ತಂದಿದ್ದಾರೆ.

ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

ಸದ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ.

”ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ ‘ಚಿನ್ನದ ಪದಕ’ ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ ಎಂದಿದ್ದಾರೆ ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

“ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ‌ ಎಂದಿದ್ದಾರೆ‌ ಡಾ. ಬಿ.ಟಿ ಮುದ್ದೇಶ. (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ