HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ಬೆನಯ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಇದಕ್ಕೂ ಮುನ್ನ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ‘ರಾಜಕಾರಣ ಬೇರೆ, ಈ ರೀತಿ ಕಾರ್ಯಕ್ರಮದಿಂದ ಏನು ಸಾಧನೆ ಮಾಡಲು ಸಾಧ್ಯ? ಬಿಜೆಪಿಯವರು ನಡೆದುಕೊಂಡ ರೀತಿ ನನ್ನ ಮನಸ್ಸಿಗೆ ನೋವಾಗಿದೆ.

ಪಾದಯಾತ್ರೆ ಮುಖ್ಯಸ್ಥರನ್ನಾಗಿ ಯಾರನ್ನ ಮಾಡಿದ್ದಾರೆ? ಯಾರು ಈ ಪ್ರೀತಂಗೌಡ? ದೇವೇಗೌಡರ ಕುಟುಂಬವನ್ನ ಸರ್ವನಾಶ ಮಾಡಲು ಹೊರಟಿದ್ದವ. ಅವನನ್ನು ಸಭೆಗೆ ಕರಿತಾರೆ, ಅದಕ್ಕೆ ನನ್ನನ್ನೂ ಕರೀತಾರೆ, ನನಗೂ ಸಹಿಸೋಕೆ ಇತಿ ಮಿತಿ ಇದೆ ಎಂದು ಮಿತ್ರ ಪಕ್ಷ ಬಿಜೆಪಿಯ ಮುಖಂಡರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.

ಪೆನ್‌ಡ್ರೈವ್‌ ಬೀದೀಲಿ ಹಂಚೋಕೆ ಯಾರು ಕಾರಣ ಎಂದು ಬಿಜೆಪಿಗರಿಗೆ ಪ್ರಶ್ನಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನನ್ನ ಕುಟುಂಬಕ್ಕೆ ವಿಷ ಹಾಕಿದವರನ್ನ ನನ್ನ ಜೊತೇಲಿ ಕೂರಿಸ್ತಾರೆ. ಈಗ ಪಾದಯಾತ್ರೆಗೆ ನಮ್ಮ ಬೆಂಬಲ ಕೇಳ್ತಾರಾ? ಎಂದು ಹರಿಹಾಯ್ದರು.

ಯಾವುದೋ ಒಂದು ಪ್ರಕರಣ ಇಟ್ಕೊಂಡು ಪಾದಯಾತ್ರೆ ಮಾಡೋದು ಎಷ್ಚು ಸರಿ? ಜನರ ಭಾವನೆ, ನೋವಿಗೆ ಸ್ಪಂದಿಸಬೇಕಾಗಿದೆ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ ಎಂದು ಬಿಜೆಪಿ ಆಯೋಜಿಸಿರುವ ಪಾದಯಾತ್ರೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್​​​ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಮತ್ತೊಂದೆಡೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಪಾದಯಾತ್ರೆಗೆ ಅಪಸ್ವರ ತೆಗೆದಿದ್ದು, ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಪ್ರರ್ಯಾಯ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿದ್ದು, ಕೂಡಲಸಂಗಮ ಅಥವಾ ಹುಬ್ಬಳ್ಳಿಯಿಂದ ಬಳ್ಳಾರಿಯವರೆಗೆ ಹೆಜ್ಜೆ ಹಾಕಲು ಸಮಾಲೋಚನೆ ನಡೆಸುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೆ, ವಿಜಯೇಂದ್ರ ಅವರು ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಭೇಟಿ ಕುರಿತು ಟ್ವಿಟ್ ಮಾಡಿರುವ ವಿಜಯೇಂದ್ರ, ನವದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾಅವರನ್ನು ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳ ಕುರಿತು ಚರ್ಚಿಸಲಾಯಿತು.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ವಿವರಗಳನ್ನು ನೀಡಲಾಯಿತು.

ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ ನಿರ್ವಹಿಸುತ್ತಿರುವ ರೀತಿ-ನೀತಿಗಳ ಕುರಿತು ಮೆಚ್ಚುಗೆ ಸೂಚಿಸಿದರು.

ಪಕ್ಷ ಬಲವೃದ್ಧಿಗೆ ಪ್ರೇರಣೆ ತುಂಬುವ ಚೈತನ್ಯಶೀಲ ವ್ಯಕ್ತಿತ್ವದ ಅಮಿತ್ ಶಾ ಅವರ ಇಂದಿನ ಭೇಟಿ ನನ್ನಲ್ಲಿ ಅದಮ್ಯ ಉತ್ಸಾಹ ತುಂಬಿದೆ ಎಂದು ಬರೆದುಕೊಂಡಿದ್ದು, ಕುಮಾರಸ್ವಾಮಿ ಮುನಿಸು, ಯತ್ನಾಳ್ ಇಕ್ಕಟ್ಟಿನ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು