R Ashok: President's rule should be brought in Karnataka: Leader of Opposition

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಆದರೆ ಅವರು ಕಲ್ಲು ಹೊಡೆಯಿರಿ, ಟಯರ್‌ ಸುಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಬಿಜೆಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದೆ. ಈ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್‌ ನಾಯಕರು, ತಮ್ಮವರು ಪ್ರತಿಭಟನೆ ಮಾಡುತ್ತಾರೆ, ನೀವು ಸಹಕಾರ ನೀಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪೊಲೀಸರ ಕೈ ಕಟ್ಟಿ ಹಾಕಿ ಕಾನೂನು ಸುವ್ಯವಸ್ಥೆ ಹಾಳುಗೆಡವಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು R Ashok ಹೇಳಿದೆರು.

ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ವತಃ ಲೂಟಿಕೋರರಾಗಿದ್ದು, ಅವರು ಅಧಿಕಾರದಿಂದ ಕೆಳಕ್ಕಿಳಿಯಬೇಕೆಂದು ಜನರು ಹೇಳುತ್ತಿದ್ದಾರೆ.

ಮುಖ್ಯಮಂತ್ರಿಯವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸದಿದ್ದರೂ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಕಳ್ಳತನ ಮಾಡಿದ್ದಾರೆ, ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಮುಖ್ಯಮಂತ್ರಿಯವರು ಶಾಸಕಾಂಗ ಪಕ್ಷದ ಬೆಂಬಲವನ್ನು ತೋರಿಸುತ್ತಿದ್ದಾರೆ. ಇದರಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆಯಲ್ಲಿ ಮುಡಾ ಹಗರಣ ಕುರಿತು ಬಿಜೆಪಿ ಚರ್ಚಿಸಲು ಮುಂದಾದಾಗ ಸಿಎಂ ಸಿದ್ದರಾಮಯ್ಯ ಪಲಾಯನ ಮಾಡಿದ್ದಾರೆ. ಅಲ್ಲಿ 224 ಶಾಸಕರು, ಮಾಧ್ಯಮಗಳು, ಅಧಿಕಾರಿಗಳಿದ್ದರೂ, ಉತ್ತರ ನೀಡಲಿಲ್ಲ. ವಿರೋಧ ಪಕ್ಷವಾಗಿ ಕರ್ತವ್ಯದಂತೆ ಬಿಜೆಪಿ ಪಾದಯಾತ್ರೆ ಮಾಡಿದೆ. ಆದರೆ ಸರ್ಕಾರದ ಅಧಿಕಾರ ಬಳಸಿಕೊಂಡು ಕಾಂಗ್ರೆಸ್‌ ಸಮಾವೇಶ ಮಾಡಿದೆ. ಇದನ್ನು ಸರ್ಕಾರ ಎನ್ನುತ್ತಾರೆಯೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಕಾಂಗ್ರೆಸ್‌ ಸರ್ಕಾರದ ಹಗರಣದ ಕುರಿತು ಬಿಜೆಪಿ, ಜೆಡಿಎಸ್‌ ಮಾತ್ರ ಪ್ರತಿಭಟಿಸುತ್ತಿಲ್ಲ. ಮಾಧ್ಯಮಗಳು ನಮಗಿಂತ ಮೊದಲೇ ಹಗರಣದ ತನಿಖೆಯ ಸುದ್ದಿಗಳನ್ನು ಪ್ರಕಟ ಮಾಡಿವೆ. ಜನರಿಗೂ ಈಗ ಸರ್ಕಾರದ ಮೇಲೆ ಅನುಮಾನ ಬಂದಿದೆ. ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಟಿ.ಜೆ.ಅಬ್ರಹಾಂ ಕೋರಿದ್ದಾರೆಯೇ ಹೊರತು ಬಿಜೆಪಿ ಕಾರ್ಯಕರ್ತರು ಕೋರಿಕೆ ಸಲ್ಲಿಸಿಲ್ಲ. ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯಪಾಲರು ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು ಸರ್ಕಾರ ವಜಾ ಮಾಡಿಲ್ಲ ಎಂದರು.

ಬಿ.ಎಸ್‌.ಯಡಿಯೂರಪ್ಪ, ಎಲ್‌.ಕೆ.ಅಡ್ವಾಣಿ, ರಾಮಕೃಷ್ಣ ಹೆಗಡೆ ಅವರ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಸಚಿವ ಬಿ.ನಾಗೇಂದ್ರ ಅವರ ತಪ್ಪು ಇಲ್ಲವಾದರೆ ರಾಜೀನಾಮೆ ಕೊಟ್ಟಿದ್ದು ಏಕೆ? ದಲಿತರಾದರೆ ರಾಜೀನಾಮೆ ಕೊಡಬೇಕು. ಆದರೆ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ಕೊಡಬಾರದು ಎಂದರೆ ಹೇಗೆ? 5 ಲಕ್ಷ ರೂ.ಗೆ ಜಮೀನು ಪಡೆದು 62 ಕೋಟಿ ರೂ. ಕೇಳುವ ಯೋಜನೆ ರಾಜ್ಯದಲ್ಲಿದ್ದರೆ ಎಲ್ಲರಿಗೂ ತಿಳಿಸಲಿ. ಇಂತಹ ಲೂಟಿಕೋರರಿಗೆ ಶಿಕ್ಷೆಯಾಗಬೇಕು ಎಂದರು.

ರಾಜ್ಯಪಾಲರ ಚಿತ್ರ ಸುಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಕಳೆದ ವರ್ಷ ಮಾಡಿದ ಪ್ರತಿಭಟನೆಗೆ ಈಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಂತಹ ದ್ವೇಷ ರಾಜಕಾರಣ ಮಾಡುವ ಕಾಂಗ್ರೆಸ್‌ ನಾಯಕರು ಎಷ್ಟು ದಿನ ಅಧಿಕಾರದಲ್ಲಿರುತ್ತಾರೆ? ಅನ್ಯಾಯದ ವಿರುದ್ಧ, ಜನರ ಪರವಾಗಿ ಹೋರಾಡುವ ಹಕ್ಕು ವಿರೋಧ ಪಕ್ಷದಲ್ಲಿರುವ ಎಲ್ಲ ಶಾಸಕರಿಗೂ ಇದೆ. ಬಿಜೆಪಿ ಕೂಡ ಕಾನೂನು ಪ್ರಕಾರ ಮುಂದೆ ಹೆಜ್ಜೆ ಇಡಲಿದೆ ಎಂದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು