Mantralayam: Saptaratrotsava celebrations at Mantralaya

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

ರಾಯಚೂರು: ಮಂತ್ರಾಲಯದ (Mantralayam) ಶ್ರೀರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ಶ್ರೀಮಠದಲ್ಲಿ ಅದ್ಧೂರಿ ಚಾಲನೆ ದೊರೆಯಿತು.

ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ರಾಯರ ಬೃಂದಾವನ ಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ (Mantralayam) ಮಂಚಾಲಮ್ಮಗೆ ನಮಿಸಿ ಪ್ರಾಕಾರದ ಮುಖ್ಯದ್ವಾರದ ಮುಂದೆ ಸಕಲ ಧಾರ್ಮಿಕ ವಿಧಿ ವಿಧಾನದ ಮೂಲಕ ಗೋಪೂಜೆ, ಅಶ್ವಪೂಜೆ, ಒಂಟೆಗಳ ಪೂಜೆ ನೆರವೇರಿಸಿ ಭಗವಾ ಧ್ವಜಾರೋಹಣ ನೆರವೇರಿಸಿ ಸಪ್ತರಾತ್ರೋತ್ಸವಕ್ಕೆ ಮುನ್ನುಡಿ ಹಾಕಿದರು.

ಈಗಾಗಲೇ ಮಠದಲ್ಲಿ ಸೇವೆ ಕೈಗೊಳ್ಳಲು ನೂರಾರು ಸ್ವಯಂ ಸೇವಕರ ಭಕ್ತರ ದಂಡು ಸಹ ಆಗಮಿಸಿದ್ದು ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ನಿನಾದದ ನಡುವೆ ವೇದ ಮಂತ್ರಗಳೊಂದಿಗೆ ಚಂಡೆ ಮದ್ದಳೆ ಸೇರಿದಂತೆ ಮಂಗಳ ವಾದ್ಯಗಳ ನಿನಾದದಲ್ಲಿ ಚಿನ್ನ, ಬೆಳ್ಳಿ, ನವರತ್ನ ಖಚಿತ ರಥಗಳನ್ನು ಶೃಂಗರಿಸಿ ಸಿದ್ಧಪಡಿಸಿ ಪ್ರಹ್ಲಾದ ರಾಜರ ಉತ್ಸವಕ್ಕೆ ಸಕಲ ಸಿದ ಪೂರ್ಣಗೊಳಿಸಲಾಗಿದೆ.

ನಂತರ ಪ್ರಹ್ಲಾದರಾಜರ ಪಲ್ಲಕ್ಕಿ ಉತ್ಸವ ಮತ್ತು ಧ ಪೂಜೆ ನಡೆಯಿತು. ಇದಾದ ಬಳಿಕ ಬೃಂದಾವನದ ಪ್ರಾಂಗಣದಲ್ಲಿ ಪ್ರಹ್ಲಾದರಾಯರ ಚಿನ್ನದ ರಥೋತ್ಕ ಜರುಗಿತು. ಮಠದ ಮುಂಭಾಗದ ಲ್ಲಿರುವ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರ ಗಳಲ್ಲಿ ದಾಸವಾಣಿ, ನೃತ್ಯ ರೂಪಕಗಳು ಜರುಗಿದವು.

ಪ್ರತಿವರ್ಷ ಮಧ್ಯಾರಾಧನೆ ದಿನ ಬೆಳಿಗ್ಗೆ ತಿರುಪತಿ ತಿರುಮಲ ದೇವಸ್ಥಾನದಿಂದ ಆಗಮಿಸುವ ಶೇಷ ಈ ಬಾರಿ ಮುಂಚೆಯೇ ಆಗಮಿಸಿದ್ದಕ್ಕೆ ಯಾವುದೆ ವಿಶೇಷ ಕಾರಣವಿಲ್ಲ. ಮಧ್ಯಾರಾಧನೆ ದಿನ ಹೆಚ್ಚಿನ ಕೆಲಸಗಳು ಮತ್ತು ನೂಕುನುಗ್ಗಲು ಇರುವುದರಿಂದ ಮುಂಚೆಯೇ ಶೇಷ ವಸ್ತ್ರವನ್ನು ಟಿಟಿಡಿ ಕಳುಹಿಸಿದೆ ಎಂದು ಮಠದ ಮೂಲಗಳು ತಿಳಿಸಿವೆ.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.