Devaraju Arasu: Pious Arasu who gave land to the poor - Tehsildar Ningappa

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಹುನಗುಂದ: ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು (Devaraju Arasu) ಅವರು ಎಂದು ತಹಶಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ (Devaraju Arasu) ಹಾಗೂ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆ ಮಾಡಿ ನಂತರ ಮಾತನಾಡಿದರು.

8 ವರ್ಷ ಕಾಲ ಮುಖ್ಯಮಂತ್ರಿಯಾಗಿ ಜನ ಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣೆ ಕಾನೂನು ಜಾರಿಗೆ ತಂದು ರೈತರಿಗೆ ಉಳುವವನೆ ಭೂ ಒಡೆಯ ಪಟ್ಟವನ್ನು ಒದಗಿಸಿಕೊಟ್ಟರು. ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ರಾಜ್ಯದ ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಿಸಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ: ವೀರಭದ್ರೇಶ್ವರ ಜಾತ್ರೆ : ದೇವರ ಮೂರ್ತಿಗಳ ಅದ್ದೂರಿ ಮೆರವಣಿಗೆ VIDEO

ಶ್ರೀ ನಾರಾಯಣ ಗುರುಗಳು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಕೇರಳದ ಜಾತಿ-ಮುಕ್ತ ಸಂಸ್ಕೃತಿಯಲ್ಲಿ ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಬೆಳೆಸಲು, ಅವರು ಅನ್ಯಾಯದ ವಿರುದ್ಧ ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿದರು.

ಹಿಂದೂಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇದೇ ಸಮಯದಲ್ಲಿ ಸನ್ಮಾನಿಸಿದರು.

ಶಿಕ್ಷಕಿ ಮುರ್ತುಜಾಬೇಗಂ ಕೊಡಗಲಿ, ಉಪನ್ಯಾಸ ನೀಡಿದರು.

ಭೂ ನ್ಯಾಯ ಮಂಡಳಿತ ಸದಸ್ಯ ಅಮರೇಶ ನಾಗೂರ, ತಾಲೂಕು ಹಿಂದೂಳಿದ ಕಲ್ಯಾಣಾಧಿಕಾರಿ ಸಂಗಮೇಶ ಗಡೇದ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಗುಡಗುಂಟಿ, ಅರಣ್ಯಾಧಿಕಾರಿ ಪಿ.ಎಂ. ಪುರಾಣ ಕಮಠ, ಗ್ರೇಡ್ ೨ ತಹಸೀಲ್ದಾರ ಮಹೇಶ ಸಂದಿಗವಾಡ, ಶಿರಸ್ಥೆದಾರ ಎಚ್.ಎಂ.ಶಿವಣಗಿ, ಶ್ರವಣ ಮುಂಡೇವಾಡಿ,, ಕಂದಾಯ ನಿರೀಕ್ಷಕ ಲಿಂಗರಾಜ ಹುನಗುಂಡಿ, ವಿನೋಕುಮಾರ ಭೋವಿ, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದರು.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.