Devaraju Arasu: Pious Arasu who gave land to the poor - Tehsildar Ningappa

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಹುನಗುಂದ: ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು (Devaraju Arasu) ಅವರು ಎಂದು ತಹಶಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ (Devaraju Arasu) ಹಾಗೂ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆ ಮಾಡಿ ನಂತರ ಮಾತನಾಡಿದರು.

8 ವರ್ಷ ಕಾಲ ಮುಖ್ಯಮಂತ್ರಿಯಾಗಿ ಜನ ಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣೆ ಕಾನೂನು ಜಾರಿಗೆ ತಂದು ರೈತರಿಗೆ ಉಳುವವನೆ ಭೂ ಒಡೆಯ ಪಟ್ಟವನ್ನು ಒದಗಿಸಿಕೊಟ್ಟರು. ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ರಾಜ್ಯದ ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಿಸಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ: ವೀರಭದ್ರೇಶ್ವರ ಜಾತ್ರೆ : ದೇವರ ಮೂರ್ತಿಗಳ ಅದ್ದೂರಿ ಮೆರವಣಿಗೆ VIDEO

ಶ್ರೀ ನಾರಾಯಣ ಗುರುಗಳು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಕೇರಳದ ಜಾತಿ-ಮುಕ್ತ ಸಂಸ್ಕೃತಿಯಲ್ಲಿ ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಬೆಳೆಸಲು, ಅವರು ಅನ್ಯಾಯದ ವಿರುದ್ಧ ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿದರು.

ಹಿಂದೂಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇದೇ ಸಮಯದಲ್ಲಿ ಸನ್ಮಾನಿಸಿದರು.

ಶಿಕ್ಷಕಿ ಮುರ್ತುಜಾಬೇಗಂ ಕೊಡಗಲಿ, ಉಪನ್ಯಾಸ ನೀಡಿದರು.

ಭೂ ನ್ಯಾಯ ಮಂಡಳಿತ ಸದಸ್ಯ ಅಮರೇಶ ನಾಗೂರ, ತಾಲೂಕು ಹಿಂದೂಳಿದ ಕಲ್ಯಾಣಾಧಿಕಾರಿ ಸಂಗಮೇಶ ಗಡೇದ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಗುಡಗುಂಟಿ, ಅರಣ್ಯಾಧಿಕಾರಿ ಪಿ.ಎಂ. ಪುರಾಣ ಕಮಠ, ಗ್ರೇಡ್ ೨ ತಹಸೀಲ್ದಾರ ಮಹೇಶ ಸಂದಿಗವಾಡ, ಶಿರಸ್ಥೆದಾರ ಎಚ್.ಎಂ.ಶಿವಣಗಿ, ಶ್ರವಣ ಮುಂಡೇವಾಡಿ,, ಕಂದಾಯ ನಿರೀಕ್ಷಕ ಲಿಂಗರಾಜ ಹುನಗುಂಡಿ, ವಿನೋಕುಮಾರ ಭೋವಿ, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು