Devaraju Arasu: Pious Arasu who gave land to the poor - Tehsildar Ningappa

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಹುನಗುಂದ: ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು (Devaraju Arasu) ಅವರು ಎಂದು ತಹಶಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ (Devaraju Arasu) ಹಾಗೂ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆ ಮಾಡಿ ನಂತರ ಮಾತನಾಡಿದರು.

8 ವರ್ಷ ಕಾಲ ಮುಖ್ಯಮಂತ್ರಿಯಾಗಿ ಜನ ಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣೆ ಕಾನೂನು ಜಾರಿಗೆ ತಂದು ರೈತರಿಗೆ ಉಳುವವನೆ ಭೂ ಒಡೆಯ ಪಟ್ಟವನ್ನು ಒದಗಿಸಿಕೊಟ್ಟರು. ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ರಾಜ್ಯದ ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಿಸಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ: ವೀರಭದ್ರೇಶ್ವರ ಜಾತ್ರೆ : ದೇವರ ಮೂರ್ತಿಗಳ ಅದ್ದೂರಿ ಮೆರವಣಿಗೆ VIDEO

ಶ್ರೀ ನಾರಾಯಣ ಗುರುಗಳು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಕೇರಳದ ಜಾತಿ-ಮುಕ್ತ ಸಂಸ್ಕೃತಿಯಲ್ಲಿ ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಬೆಳೆಸಲು, ಅವರು ಅನ್ಯಾಯದ ವಿರುದ್ಧ ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿದರು.

ಹಿಂದೂಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇದೇ ಸಮಯದಲ್ಲಿ ಸನ್ಮಾನಿಸಿದರು.

ಶಿಕ್ಷಕಿ ಮುರ್ತುಜಾಬೇಗಂ ಕೊಡಗಲಿ, ಉಪನ್ಯಾಸ ನೀಡಿದರು.

ಭೂ ನ್ಯಾಯ ಮಂಡಳಿತ ಸದಸ್ಯ ಅಮರೇಶ ನಾಗೂರ, ತಾಲೂಕು ಹಿಂದೂಳಿದ ಕಲ್ಯಾಣಾಧಿಕಾರಿ ಸಂಗಮೇಶ ಗಡೇದ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಗುಡಗುಂಟಿ, ಅರಣ್ಯಾಧಿಕಾರಿ ಪಿ.ಎಂ. ಪುರಾಣ ಕಮಠ, ಗ್ರೇಡ್ ೨ ತಹಸೀಲ್ದಾರ ಮಹೇಶ ಸಂದಿಗವಾಡ, ಶಿರಸ್ಥೆದಾರ ಎಚ್.ಎಂ.ಶಿವಣಗಿ, ಶ್ರವಣ ಮುಂಡೇವಾಡಿ,, ಕಂದಾಯ ನಿರೀಕ್ಷಕ ಲಿಂಗರಾಜ ಹುನಗುಂಡಿ, ವಿನೋಕುಮಾರ ಭೋವಿ, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ