Ilakal nagarasabhe news elected President and voice President with mla vijayananda kashappanavar

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ.

18 ಮತಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದ ನಂತರ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಾಜಿ‌ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ವಿರುದ್ಧ ಏಕ‌ವಚನದಲ್ಲಿ ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಪರ ಊರ ಗೌಡ ನಮ್ಮೂರಲ್ಲಿ ಕರ ಕಟ್ಟುವ ಗೂಟ. ಅವನು ಲಿಂಗಸೂರು ಗೌಡ, ಲೆಕ್ಕಿಹಾಳ ಗೌಡ ಇರಬಹುದು. ನಮ್ಮೂರಲ್ಲಿ ಕರ ಕಟ್ಟುವ” ಎಂದು ದೊಡ್ಡನಗೌಡರ ಕುರಿತು ವ್ಯಂಗ್ಯವಾಡಿದರು.

“ಬಿಜೆಪಿಯ ದೂರಾಡಳಿತದಿಂದ ಬೇಸತ್ತ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ. ಯಾವುದೇ ವ್ಯಕ್ತಿಗೆ ಸ್ವಾತಂತ್ರ್ಯ ಮುಖ್ಯ. ಅಲ್ಲಿ ಅವರಿಗೆ ಸ್ವತಂತ್ರ ಇರಲಿಲ್ಲ. ಆದ ಕಾರಣ ಕಾಂಗ್ರೆಸ್ ಸೇರಿದ್ದಾರೆ.” ಎಂದು ಆಪರೇಷನ್ ಹಸ್ತವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಮರ್ಥನೆ ಮಾಡಿಕೊಂಡರು.

31 ಜನ ಸದಸ್ಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 30 ಜನ ನಗರಸಭೆ ಸದಸ್ಯರು, ಒಬ್ಬರು ಶಾಸಕರು, ಒಬ್ಬರು ಲೋಕಸಭಾ ಸದಸ್ಯರು ಸೇರಿದಂತೆ ಒಟ್ಟು 32 ಮತಗಳು ಚಲಾವಣೆಗೊಂಡಿದ್ದು, 18 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ: Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಎಂಟೆ ಎಂಟು ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದು ಮಾತ್ರ ರೋಚಕ ಕಹನಿ. ಆಪರೇಷನ್ ಹಸ್ತ ಮಾಡಿದ ಶಾಸಕ ಕಾಶಪ್ಪನವರ್, 6 ಜನರ ಬಿಜೆಪಿ ಸದಸ್ಯರನ್ನು ಸೆಳೆಯುವಲ್ಲಿ ಯಶಸ್ಸು ಕಂಡರು. ಇದರೊಂದಿಗೆ ಜೆಡಿಎಸ್ ನ ಇಬ್ಬರು ಮತ್ತು ಪಕ್ಷೇತರ ಸದಸ್ಯರನ್ನು ಸೆಳೆದುಕೊಂಡ ಕೈ ನಾಯಕರು ಇಳಕಲ್ ನಗರಸಭೆಯ ಅಧಿಕಾರದ ಗದ್ದುಗೆ ಏರಿದರು.

ಈ ಮೂಲಕ ಹೆಚ್ಚು ಸದಸ್ಯರನ್ನು ಹೊಂದಿದ್ದರೂ ನಗರಸಭೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ಬಿಜೆಪಿ ‌ನಾಯಕರು ಮುಖಭಂಗ ಅನುಭವಿಸಿದರು.

ನಗರಸಭೆಯ ಅಧ್ಯಕ್ಷೆಯಾಗಿ ಸುಧಾರಾಣಿ, ಉಪಾಧ್ಯಕ್ಷೆಯಾಗಿ ಕಾಳಮ್ಮ ಜಕ್ಕಾ ಆಯ್ಕೆಯಾಗಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ