ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ