ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ