Crime news: Child killed in husband-wife fight..!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ. (Crime news)

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

Join Our Telegram: https://t.me/dcgkannada

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ. (Crime news)

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600