Crime news: Child killed in husband-wife fight..!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

ಮಂಡ್ಯ: ಮಂಡ್ಯದಲ್ಲಿ ಗೃಹಿಣಿ ಅನುಮಾಸ್ಪದ ಸಾವನ್ನಪ್ಪಿದ್ದು, ಸಿಟ್ಟಿಗೆದ್ದ ಸಂಬಂಧಿಕರು ಗಂಡನ ಮನೆಗೆ ಬೆಂಕಿ ಹಾಕಿರುವ ದುರ್ಘಟನೆ ಸಂಭವಿಸಿದೆ. (Sad news)

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಗದ್ದೆ ಹೊಸೂರಿನಲ್ಲಿ ಈ ಘಟನೆ ನಡೆದಿದೆ. ಸ್ವಾತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಗೃಹಿಣಿ ಎಂದು ಗುರುತಿಸಲಾಗಿದೆ. ಈ ನಡುವೆ ಸ್ವಾತಿ ಮನೆಗೆ ಸಂಬಂಧಿಕರು ಬೆಂಕಿಗೆ ಇಡುತ್ತಿದ್ದ ಹಾಗೇ ಗಂಡ ಮೋಹನ್‌ ಕೂಡ ಕರೆಗೆ ಹಾರಿ ಆತ್ಮಹತ್ಯೆ (Sad news) ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Join Our Telegram: https://t.me/dcgkannada

ಸದ್ಯ, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ.

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Latest News

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:                                                                                                                                                           ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು ಗ್ರಾಮದೇವತೆ ಶ್ರೀ ಗದ್ಯಮದೇವಿ ದೇವಸ್ಥಾನದಿಂದ ಪ್ರಾರಂಭಿಸಿದರು. ಪ್ರತಿ ವರ್ಷದಂತೆ ಈ ವರ್ಷ ಸೇರಿ 23ನೇ ವರ್ಷ ಪಾದಯಾತ್ರೆ ಇದಾಗಿದ್ದು ಈ ಪಾದಯಾತ್ರೆಯಲ್ಲಿ ಮಾರನಾಳ ಊರಿನ ಗುರು ಹಿರಿಯರು ಯುವಕರು ಹಾಗೂ ಮಹಿಳೆಯರು ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯು ಸರಿ-ಸುಮಾರು 120 ಕಿಲೋ ಮೀಟರ್ ನಷ್ಟು ದೂರವಿದ್ಧಿ ಆದರೂ ಸಹಾ ಮಳೆ, ಗಾಳಿ, ಚಳ್ಳಿ,

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು. ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ ಪೃಥ್ವಿ ನಾಡಗೌಡ, ಅಪ್ಪು ನಾಡಗೌಡ, ಮಲ್ಲಿಕಾರ್ಜುನ ನಾಡಗೌಡ ಇದ್ದರು.