A pub bouncer ran amok after a bike was hit by a car. The video tweeted by the police went viral

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೆಂಗಳೂರು: ರಸ್ತೆಯಲ್ಲಿ ದಿಢೀರನೇ ಬ್ರೇಕ್ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ನಿರ್ಲಕ್ಷಿಸಿದರು ಎಂದು ಸಿಟ್ಟಿಗೆದ್ದು ಸಾಫ್ಟ್‌ವೇರ್ ಉದ್ಯೋಗಿ ದಂಪತಿ ಕಾರನ್ನು ಅಡ್ಡಗಟ್ಟಿ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಪಬ್ ಬೌನ್ಸರ್‌ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬೆಳ್ಳಂದೂರು ನಿವಾಸಿ ನವೀನ್ ರೆಡ್ಡಿ ಬಂಧಿತನಾಗಿದ್ದು, ಸರ್ಜಾಪುರ ರಸ್ತೆಯ ಮೇಲ್ವೇತುವೆ ಬಳಿ ಸೋಮವಾರ ರಾತ್ರಿ ರೆಡ್ಡಿ ಮನೆಗೆ ಮರಳುವಾಗ ಮಾರ್ಗ ಮಧ್ಯೆ ಈ ಗಲಾಟೆ ನಡೆದಿದೆ.

Join Our Telegram: https://t.me/dcgkannada

ತಮ್ಮ ಕಾರಿನ ಮೇಲೆ ರೆಡ್ಡಿ ಹಲ್ಲೆ ನಡೆಸಿದ್ದ ವಿಡಿಯೋ ವನ್ನು ಟ್ವಿಟರ್ ನಲ್ಲಿ ಶೇರ್‌ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ಸಾಫ್ಟ್‌ವೇ‌ರ್ ಉದ್ಯೋಗಿ ಜಿತಿನ್ ದೂರು ನೀಡಿದ್ದರು. ಈ ಗಲಾಟೆ ವಿಡಿಯೋ ವೈರಲ್ ಆಗಿ ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯ ವಿವರ:

ಸರ್ಜಾಪುರ ಮೇಲ್ಲೇತುವೆ ಇಳಿಯುವಾಗ ದಿಢೀರನೇ ತಮ್ಮ ಕಾರಿಗೆ ಜಿತಿನ್‌ ರಾಜ್ ಬ್ರೇಕ್ ಹಾಕಿದ್ದಾರೆ. ಆ ವೇಳೆ ಕಾರಿನ ಹಿಂದೆ ಬರುತ್ತಿದ್ದ ಕಂಗಾಲಾಗಿ ನವೀನ್ ರೆಡ್ಡಿ, ಟೆಕ್ಕಿ ಕಾರಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದಿದ್ದಾನೆ. ಆದರೆ ಕೆಳಗೆ ಬಿದ್ದರು ವಿಚಾರಿಸದೆ ಜಿತಿನ್ ಮುಂದು ವರೆದಿದ್ದಾರೆ.

ಈ ವೇಳೆ ಬೈಕ್ ಅನ್ನು ಓಡಿಸಿಕೊಂಡು ಕಾರಿನ ಮುಂದೆ ಬಂದ ನವೀನ್, ಕಾರು ನಿಲ್ಲಿಸುವಂತೆ ಸೂಚಿಸಿದ್ದಾನೆ. ಆದರೆ ಈ ಮಾತಿಗೆ ಕ್ಯಾರೇ ಎನ್ನದೆ ಕಾರು ಚಾಲಾಯಿ ಸಲು ಜಿತಿನ್ ಮುಂದಾಗಿದ್ದಾರೆ. ಈ ನಿರ್ಲಕ್ಷ್ಯತನ ವರ್ತನೆಯಿಂದ ಕೆರಳಿದ ನವೀನ್, ತಕ್ಷಣವೇ ಕಾರಿನ ವೈಫ‌ರ್ ಕಿತ್ತು ಹಾಕಿ ಗಲಾಟೆ ಮಾಡಿದ್ದಾನೆ.

ಈ ದುಂಡಾವರ್ತನೆಗೆ ಭಯ ಗೊಂಡ ಜಿತಿನ್ ರಾಜ್ ದಂಪತಿ, ಕಾರಿನಲ್ಲಿ ಮಗುವಿದೆ ಗಲಾಟೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಕೊನೆಗೆ ಸಾರ್ವಜನಿಕರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ವಿಡಿಯೋವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡು ನಗರ ಪೊಲೀಸ್ ಆಯುಕ್ತರಿಗೆ ಜಿತಿನ್ ದೂರು ಕೊಟ್ಟಿದ್ದರು. ಆರೋಪಿ ಕೋರಮಂಗಲದ ಪಬ್‌ನಲ್ಲಿ ಬೌನ್ಸರ್‌ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ