POP Ganesh: An artist family in making an eco-friendly Ganesha idol

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

ಲೇಖನ: ಹರೀಶ
ಪರಿಸರ ರಕ್ಷಣೆಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸರ್ಕಾರ ಹಾಗೂ ತಜ್ಞರು ಎಷ್ಟೇ ಹೇಳಿದರೂ ಮೂರ್ತಿಕಾರು ಮಾತ್ರ ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಗಣೇಶ (POP Ganesh) ಮೂರ್ತಿಗಳನ್ನ ತಯಾರು ಮಾಡುತ್ತಿದ್ದಾರೆ.

ಆದರೆ, ಇಲ್ಲೊಂದು ಕುಟುಂಬ ಮಾತ್ರ ಶತಮಾತ ಮಾನಗಳಿಂದಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡಿಕೊಂಡು ಬಂದಿದೆ.

Join Our Telegram: https://t.me/dcgkannada

ಹೌದು, ಗಣೇಶಪುರದ ಭಾರತ ನಗರದ ಸಂತೋಷ ಚಿತ್ರಗಾರ ಕುಟುಂಬ ಶತಮಾನಗಳಿಂದಲೂ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣ ಮಾಡಿಕೊಂಡು ಬಂದಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(POP), ವಿವಿಧ ಬಗೆಯ ಗಣೇಶನ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳನ್ನು ಲೇಪಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕಾರಣ ಇತ್ತೀಚಿನ ವರ್ಷಗಳಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳತ್ತ ಒಲವು ಹೆಚ್ಚಿದೆ.

ಸಂಸ್ಥೆಗಳು, ಯುವಕರ ಸಂಘಗಳು ಸೇರಿ ಹಲವರು ಪರಿಸರ ಸ್ನೇಹಿ ಗಣೇಶ ತಯಾರಿಕರ ಬಳಿ ಬಂದು ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕ ಸಂತೋಷ ಚಿತ್ರಗಾರ.

ಪೂರ್ವಿಕರಿಂದ ಬಂದ ಕಲೆ:

ಇವರ ಪೂರ್ವಿಕರು ಮಣ್ಣಿನ ಗಣಪತಿ ಮೂರ್ತಿಯನ್ನೇ ಪೂಜಿಸುತ್ತಿದ್ದರು. ತಯಾರಿಸುತ್ತಿದ್ದರು. ಹೀಗಾಗಿ, ಸಂತೋಷ ಚಿತ್ರಗಾರ ಹಾಗೂ ಅವರ ಕುಟುಂಬದವರು ಸೇರಿ ಇದೀಗ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

ಒಂದು ತಿಂಗಳ ಮುಂಚಿತವಾಗಿ ನಿಮಗೆ ಬೇಕಾದ ರೀತಿಯ ಗಣೇಶ ಮೂರ್ತಿ ಮಾಡಲು ಹೇಳಿದ್ರೆ ಅದೇ ತರಹದ ಗಣೇಶ ಮೂರ್ತಿ ಮಾಡಿಕೊಡುತ್ತಾರೆ.

ನಿವೃತ್ತ ಸೈನಿಕ:

ಸಂತೋಷ ಚಿತ್ರಗಾರ ಅವರು ದೇಶ ಸೇವೆ ಮಾಡಿ,ಇದೀಗ ನಿವೃತ್ತಿ ಹೊಂದಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಸೈನ್ಯದಲ್ಲಿ ಇದ್ದಾಗಲೂ ಗಣೇಶ ಮೂರ್ತಿ ಮಾಡಲು ರಜೆ ಹಾಕಿ ಬಂದು ಪರಿಸರ ಸ್ನೇಹಿ ಗಣೇಶ ನಿರ್ಮಾಣ ಮಾಡುತ್ತಿದ್ದರು. ಇವರು ಡ್ರಾಯಿಂಗ್ ಕೋರ್ಸ್ ಹಾಗೂ ಮೂರ್ತಿ ತಯಾರಿಕೆ ಕೋರ್ಸ್ ಮುಗಿಸಿದ್ದಾರೆ. ಹೀಗಾಗಿ ಇವರಿಂದ ಸುಂದರ ಮೂರ್ತಿ ನಿರ್ಮಾಣವಾಗುತ್ತಿವೆ.

ಪಿಒಪಿಯಿಂದ ಜಲಚಲರಕ್ಕೆ ಕಂಟಕ:

ಪಿಒಪಿ ಬಣ್ಣದ ಗಣಪತಿ ಮೂರ್ತಿಗಳನ್ನು ಕೆರೆ, ಬಾವಿಗಳಿಗೆ ಬಿಡುವುದರಿಂದ ಅಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಜಲಚರಗಳು ರಾಸಾಯನಿಕ ಬಣ್ಣದ ನೀರನ್ನು ಕುಡಿಯುವುದರಿಂದ ಪ್ರಾಣ ಕಳೆದುಕೊಳ್ಳುತ್ತವೆ. ಇದಷ್ಟೇ ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳು ಕರಗದೇ ಹಾಗೇ ಉಳಿದು ನೀರಿ ಸೆಲೆ ನಾಶವಾಗಿತ್ತದೆ. ಹೀಗಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ.

ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣ ಮಾಡುತ್ತಿದ್ದೇವೆ. ನಮ್ಮ ಪೂರ್ವಜರು ಮಣ್ಣಿನ ಗಣೇಶ ತಯಾರಿ ಮಾಡುತ್ತಿದ್ದರು. ಇತ್ತೀಚಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಪರಿಸರ ಸ್ನೇಹಿ ಗಣೇಶ ತಯಾರಿ ತೃಪ್ತಿ ನೀಡಿದೆ ಎನ್ನುತ್ತಾರೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಚಿತ್ರಕಾರ ಸಂತೋಷ.

ಇದನ್ನೂ ಓದಿ: ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು