POP Ganesh: An artist family in making an eco-friendly Ganesha idol

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

ಲೇಖನ: ಹರೀಶ
ಪರಿಸರ ರಕ್ಷಣೆಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸರ್ಕಾರ ಹಾಗೂ ತಜ್ಞರು ಎಷ್ಟೇ ಹೇಳಿದರೂ ಮೂರ್ತಿಕಾರು ಮಾತ್ರ ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಗಣೇಶ (POP Ganesh) ಮೂರ್ತಿಗಳನ್ನ ತಯಾರು ಮಾಡುತ್ತಿದ್ದಾರೆ.

ಆದರೆ, ಇಲ್ಲೊಂದು ಕುಟುಂಬ ಮಾತ್ರ ಶತಮಾತ ಮಾನಗಳಿಂದಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡಿಕೊಂಡು ಬಂದಿದೆ.

Join Our Telegram: https://t.me/dcgkannada

ಹೌದು, ಗಣೇಶಪುರದ ಭಾರತ ನಗರದ ಸಂತೋಷ ಚಿತ್ರಗಾರ ಕುಟುಂಬ ಶತಮಾನಗಳಿಂದಲೂ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣ ಮಾಡಿಕೊಂಡು ಬಂದಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(POP), ವಿವಿಧ ಬಗೆಯ ಗಣೇಶನ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳನ್ನು ಲೇಪಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕಾರಣ ಇತ್ತೀಚಿನ ವರ್ಷಗಳಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳತ್ತ ಒಲವು ಹೆಚ್ಚಿದೆ.

ಸಂಸ್ಥೆಗಳು, ಯುವಕರ ಸಂಘಗಳು ಸೇರಿ ಹಲವರು ಪರಿಸರ ಸ್ನೇಹಿ ಗಣೇಶ ತಯಾರಿಕರ ಬಳಿ ಬಂದು ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕ ಸಂತೋಷ ಚಿತ್ರಗಾರ.

ಪೂರ್ವಿಕರಿಂದ ಬಂದ ಕಲೆ:

ಇವರ ಪೂರ್ವಿಕರು ಮಣ್ಣಿನ ಗಣಪತಿ ಮೂರ್ತಿಯನ್ನೇ ಪೂಜಿಸುತ್ತಿದ್ದರು. ತಯಾರಿಸುತ್ತಿದ್ದರು. ಹೀಗಾಗಿ, ಸಂತೋಷ ಚಿತ್ರಗಾರ ಹಾಗೂ ಅವರ ಕುಟುಂಬದವರು ಸೇರಿ ಇದೀಗ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

ಒಂದು ತಿಂಗಳ ಮುಂಚಿತವಾಗಿ ನಿಮಗೆ ಬೇಕಾದ ರೀತಿಯ ಗಣೇಶ ಮೂರ್ತಿ ಮಾಡಲು ಹೇಳಿದ್ರೆ ಅದೇ ತರಹದ ಗಣೇಶ ಮೂರ್ತಿ ಮಾಡಿಕೊಡುತ್ತಾರೆ.

ನಿವೃತ್ತ ಸೈನಿಕ:

ಸಂತೋಷ ಚಿತ್ರಗಾರ ಅವರು ದೇಶ ಸೇವೆ ಮಾಡಿ,ಇದೀಗ ನಿವೃತ್ತಿ ಹೊಂದಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಸೈನ್ಯದಲ್ಲಿ ಇದ್ದಾಗಲೂ ಗಣೇಶ ಮೂರ್ತಿ ಮಾಡಲು ರಜೆ ಹಾಕಿ ಬಂದು ಪರಿಸರ ಸ್ನೇಹಿ ಗಣೇಶ ನಿರ್ಮಾಣ ಮಾಡುತ್ತಿದ್ದರು. ಇವರು ಡ್ರಾಯಿಂಗ್ ಕೋರ್ಸ್ ಹಾಗೂ ಮೂರ್ತಿ ತಯಾರಿಕೆ ಕೋರ್ಸ್ ಮುಗಿಸಿದ್ದಾರೆ. ಹೀಗಾಗಿ ಇವರಿಂದ ಸುಂದರ ಮೂರ್ತಿ ನಿರ್ಮಾಣವಾಗುತ್ತಿವೆ.

ಪಿಒಪಿಯಿಂದ ಜಲಚಲರಕ್ಕೆ ಕಂಟಕ:

ಪಿಒಪಿ ಬಣ್ಣದ ಗಣಪತಿ ಮೂರ್ತಿಗಳನ್ನು ಕೆರೆ, ಬಾವಿಗಳಿಗೆ ಬಿಡುವುದರಿಂದ ಅಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಜಲಚರಗಳು ರಾಸಾಯನಿಕ ಬಣ್ಣದ ನೀರನ್ನು ಕುಡಿಯುವುದರಿಂದ ಪ್ರಾಣ ಕಳೆದುಕೊಳ್ಳುತ್ತವೆ. ಇದಷ್ಟೇ ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳು ಕರಗದೇ ಹಾಗೇ ಉಳಿದು ನೀರಿ ಸೆಲೆ ನಾಶವಾಗಿತ್ತದೆ. ಹೀಗಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ.

ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣ ಮಾಡುತ್ತಿದ್ದೇವೆ. ನಮ್ಮ ಪೂರ್ವಜರು ಮಣ್ಣಿನ ಗಣೇಶ ತಯಾರಿ ಮಾಡುತ್ತಿದ್ದರು. ಇತ್ತೀಚಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಪರಿಸರ ಸ್ನೇಹಿ ಗಣೇಶ ತಯಾರಿ ತೃಪ್ತಿ ನೀಡಿದೆ ಎನ್ನುತ್ತಾರೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಚಿತ್ರಕಾರ ಸಂತೋಷ.

ಇದನ್ನೂ ಓದಿ: ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ