Muddebihal news: Incomplete bridge work; Letter for sanction under MLA Regional Development Fund

Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ

Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮೀಪದಲ್ಲಿ ಬರುವ ಅಮರೇಶ್ವರ ದೇವಸ್ಥಾನ ಹತ್ತಿರ ಇರುವ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆ ಅಡಿಯಲ್ಲಿ ಬರುವ ವಿತರಣಾ ಕಾಲುವೆ 13ಎ ಕಿ.ಮೀ.10.60ರಲ್ಲಿ ಕಾಲುವೆ ಬ್ರಿಡ್ಜ್ ನಿರ್ಮಾಣ ಮಾಡಲು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಾತಿ ನೀಡುವಂತೆ ಕೆಆರ್‌ಡಿಸಿಎಲ್ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಜಿಲ್ಲಾಧಿಕಾರಿಗೆ ಬುಧವಾರ ಪತ್ರ ಬರೆದಿದ್ದಾರೆ.

Join Our Telegram: https://t.me/dcgkannada

ನಾಲ್ಕು ಹಳ್ಳಿಗಳ ರೈತಾಪಿ ಜನರಿಗೆ ನೀರಾವರಿಗೆ ಅನುಕೂಲ ಒದಗಿಸುವ ಈ ಯೋಜನೆಯ ಬಾಕಿ ಕಾಮಗಾರಿ ಆರಂಭಕ್ಕೆ ಅಗತ್ಯವಿರುವ 35 ಲಕ್ಷ ರೂ.ಗಳನ್ನು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರಾತಿ ನೀಡಿ ಕೆ.ಆರ್.ಐ.ಡಿ.ಎಲ್ ವಿಭಾಗಕ್ಕೆ ವಹಿಸುವಂತೆ ಡಿಸಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಶಿವಾನಂದ ವಾಲಿ, ಸದರಿ ಕಾಮಗಾರಿಯ ಅಗತ್ಯತೆಯನ್ನು ಮನಗಂಡು ಸರ್ಕಾರದ ಅನುದಾನಕ್ಕೆ ಕಾಯದೇ ಶಾಸಕರು ಮುತುವರ್ಜಿ ವಹಿಸಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಳಸುವಂತೆ ಡಿಸಿಗೆ ಪತ್ರ ಬರೆದಿದ್ದಕ್ಕೆ ರೈತರ ಪರವಾಗಿ ಅಭಿನಂದಿಸಿದ್ದು ಶೀಘ್ರ ಜಿಲ್ಲಾಧಿಕಾರಿಗಳು ಈ ಕಾಮಗಾರಿಗೆ ಮಂಜೂರಾತಿ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು