Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ