Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ