Koppal: The bull going around the temple every day.. People are surprised

Koppal: ಪ್ರತಿದಿನ ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿರುವ ಗೂಳಿ.. ಜನರಲ್ಲಿ ಅಚ್ಚರಿ! (ವಿಡಿಯೋ ನೋಡಿ)

Koppal: ಪ್ರತಿದಿನ ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿರುವ ಗೂಳಿ.. ಜನರಲ್ಲಿ ಅಚ್ಚರಿ! (ವಿಡಿಯೋ ನೋಡಿ)

ಕೊಪ್ಪಳ: ಗೂಳಿಯೊಂದು ಪ್ರತಿ ದಿನ ದೇವಾಲಯದ ಪ್ರದಕ್ಷಿಣೆ ಹಾಕುವ ಮೂಲಕ ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ.

ಹೌದು, ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿರುವ ಯರಡೋಣಾ ಗ್ರಾಮದಲ್ಲಿರುವ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಗೂಳಿಯೊಂದು ಕಳೆದ ನಾಲ್ಕು ದಿನಗಳಿಂದ ಪ್ರತಿದಿನ ರಾತ್ರಿ ಗುಡಿಯ ಸುತ್ತಲೂ ಪ್ರದಕ್ಷಿಣೆ ಹಾಕುತ್ತಿದೆ. ಇದನ್ನು ಕಂಡ ಗ್ರಾಮಸ್ಥರು ಆಶ್ಚರ್ಯಗೊಂಡಿದ್ದಾರೆ.

Join Out Telegram: https://t.me/dcgkannada

ಈ ಗೂಳಿ ಗ್ರಾಮದ ನಿವಾಸಿಗಳು ಸಾಕಿದ್ದಲ್ಲ. ಊರವರು ಹೇಳುವ ಪ್ರಕಾರ ಗ್ರಾಮದ ಆರಾಧ್ಯ ದೈವ ಶ್ರೀ ಮುರಡಬಸವೇಶ್ವರ ದೇವಸ್ಥಾನಕ್ಕೆ ಬಿಟ್ಟಿರುವ ಗೂಳಿಯಾಗಿದೆ. ಇದು ಪ್ರದಕ್ಷಿಣೆ ಹಾಕುಬ ಮೂಲಕ ಗ್ರಾಮ ದೇವತೆ ಗೆ ಭಕ್ತಿ ಅರ್ಪಿಸುತ್ತಿದೆ ಎನ್ನುತ್ತಾರೆ ಸ್ಥಳೀಯರು.

ಉತ್ತರ ಕರ್ನಾಟಕದಲ್ಲಿ ಗೂಳಿಗಳನ್ನು ದೇವರಿಗೆ ಬಿಡುವ ಪದ್ಧತಿ ಈಗಲೂ ಜಾರಿಯಲ್ಲಿದೆ. ಹಾಗೆ ದೇವರಿಗೆ ಬಿಟ್ಟ ಗೂಳಿಗಳ ಯೋಗಕ್ಷೇಮ ಆಯಾ ಊರವರು ನೋಡಿಕೊಳ್ಳುತ್ತಾರೆ.

ಇದನ್ನೂ ಓದಿ: Vijay: ಖ್ಯಾತ ನಟ ರಾಜಕೀಯಕ್ಕೆ‌ ಎಂಟ್ರಿ.. ಸ್ವಂತ ಪಕ್ಷದ ಧ್ವಜ, ಚಿಹ್ನೆ ಅನಾವರಣ.. (ವಿಡಿಯೋ ನೋಡಿ)

ಯರಡೋಣಾ ಗ್ರಾಮದಲ್ಲಿ ನಿನ್ನೆ ಊರಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದರೆ, ಗೂಳಿ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಬರೋಬ್ಬರಿ 35 ಸುತ್ತುಗಳನ್ನು ಹಾಕಿದೆಯಂತೆ. ಇದು ಗ್ರಾಮದಲ್ಲಿ ದೊಡ್ಡ ಸುದ್ದಿಯಾಗಿ, ಸ್ಥಳೀಯರು ಗುಂಪು ಗುಂಪಾಗಿ ಬಂದು ಗೂಳಿಯನ್ನು ನೋಡಲು ಬರುತ್ತಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು