Muda case: Governor did not mean to put CM in jail: R. Ashoka Clarity

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

ಮಂಡ್ಯ: ಮುಡಾ ಹಗರಣ(Muda case)ದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashok) ಆರೋಪಿಸಿದರು‌.

Join Our Telegram: https://t.me/dcgkannada

ಮಂಡ್ಯದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ(CBI) ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು (Muda case) ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದರು.

ಈಗ ವೈಟ್‌ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್‌ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್‌ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ ಎಂದು ದೂರಿದರು.

ಜೈಲಿಗೆ ಹಾಕಿ ಎಂದಿಲ್ಲ:

ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು ಎಂದರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಬಿಜೆಪಿ ಸರ್ಕಾರ 40% ಕಮಿಷನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ ಎಂದರು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ