ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು ಬೆಳಗ್ಗೆ ನಾಯಿಯೊಂದು ಬೋನಿನೊಳಗಡೆ ಬಿದ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬುಧವಾರ ಡ್ರೋಣ್ ಕ್ಯಾಮೆರಾ ಮೂಲಕ ಕಾಡುಪ್ರಾಣಿ ಪತ್ತೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಅವರು, ಸದ್ಯದ ಮಟ್ಟಿಗೆ ಕಾಣಿಸಿಕೊಂಡಿರುವ ಕಾಡುಪ್ರಾಣಿ ಮಾನವನ ಮೇಲೆ ದಾಳಿ ಮಾಡುವ ಸಾಧ್ಯತೆ ಕಡಿಮೆ ಇದ್ದು ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಜೆ.ಸಂಗಾಲಕ, ಉಪ ಅರಣ್ಯಾಧಿಕಾರಿ ರಾಜೇಂದ್ರ ಹುನ್ನೂರ, ಸಿಬ್ಬಂದಿ ಯಲ್ಲಪ್ಪ ಹಿರೇಕುರುಬರ, ವಿಠ್ಠಲ ಬೋರಟಗಿ, ಪ್ರಜ್ವಲ್ ಶೆಟ್ಟರ, ಲಖನ ಕಲಾಲ, ಮುತ್ತು ಮಾದರ, ಶ್ರೀನಿವಾಸ ಐಹೊಳ್ಳಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಣದ ಕಾಡುಪ್ರಾಣಿ-ಮುಂದುವರೆದ ಆತಂಕ : ಕಾಡುಪ್ರಾಣಿ ಚಿರತೆಯೋ , ಕತ್ತೆಕಿರಬುವೋ ಎಂಬುದು ಈವರೆಗೂ ಖಚಿತವಾಗಿಲ್ಲ. ಅರಣ್ಯ ಇಲಾಖೆಯಿಂದ ಸಾಮಾನ್ಯ ರೀತಿಯಲ್ಲಿ ಯಾವುದೇ ಸುರಕ್ಷಿತ ಸಾಧನಗಳನ್ನು ಉಪಯೋಗಿಸದೇ ಕಾರ್ಯಾಚರಣೆ ಮುಂದುವರೆಸಿರುವುದು ಗ್ರಾಮಸ್ಥರಿಗೆ ತೀವ್ರ ಆತಂಕ ತಂದೊಡ್ಡಿದೆ.

ತಾಲ್ಲೂಕಾಡಳಿತ ಈ ಕಾಡುಪ್ರಾಣಿ ದಾಳಿ ಪ್ರಕರಣವನ್ನು ಹಗುರುವಾಗಿ ಪರಿಗಣಿಸಿರುವುದು ಕಂದಗನೂರು, ಚಿರ್ಚನಕಲ್, ಮುದೂರು, ಯರಝರಿ, ಚಲಮಿ, ಹಂಡರಗಲ್, ನಾಗರಾಳ , ಹರಿಂದ್ರಾಳ ಗ್ರಾಮಗಳ ರೈತರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿ ಕಾಡುಪ್ರಾಣಿ ಪತ್ತೆ ಹಚ್ಚಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ