ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು ಬೆಳಗ್ಗೆ ನಾಯಿಯೊಂದು ಬೋನಿನೊಳಗಡೆ ಬಿದ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬುಧವಾರ ಡ್ರೋಣ್ ಕ್ಯಾಮೆರಾ ಮೂಲಕ ಕಾಡುಪ್ರಾಣಿ ಪತ್ತೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಅವರು, ಸದ್ಯದ ಮಟ್ಟಿಗೆ ಕಾಣಿಸಿಕೊಂಡಿರುವ ಕಾಡುಪ್ರಾಣಿ ಮಾನವನ ಮೇಲೆ ದಾಳಿ ಮಾಡುವ ಸಾಧ್ಯತೆ ಕಡಿಮೆ ಇದ್ದು ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಜೆ.ಸಂಗಾಲಕ, ಉಪ ಅರಣ್ಯಾಧಿಕಾರಿ ರಾಜೇಂದ್ರ ಹುನ್ನೂರ, ಸಿಬ್ಬಂದಿ ಯಲ್ಲಪ್ಪ ಹಿರೇಕುರುಬರ, ವಿಠ್ಠಲ ಬೋರಟಗಿ, ಪ್ರಜ್ವಲ್ ಶೆಟ್ಟರ, ಲಖನ ಕಲಾಲ, ಮುತ್ತು ಮಾದರ, ಶ್ರೀನಿವಾಸ ಐಹೊಳ್ಳಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಣದ ಕಾಡುಪ್ರಾಣಿ-ಮುಂದುವರೆದ ಆತಂಕ : ಕಾಡುಪ್ರಾಣಿ ಚಿರತೆಯೋ , ಕತ್ತೆಕಿರಬುವೋ ಎಂಬುದು ಈವರೆಗೂ ಖಚಿತವಾಗಿಲ್ಲ. ಅರಣ್ಯ ಇಲಾಖೆಯಿಂದ ಸಾಮಾನ್ಯ ರೀತಿಯಲ್ಲಿ ಯಾವುದೇ ಸುರಕ್ಷಿತ ಸಾಧನಗಳನ್ನು ಉಪಯೋಗಿಸದೇ ಕಾರ್ಯಾಚರಣೆ ಮುಂದುವರೆಸಿರುವುದು ಗ್ರಾಮಸ್ಥರಿಗೆ ತೀವ್ರ ಆತಂಕ ತಂದೊಡ್ಡಿದೆ.

ತಾಲ್ಲೂಕಾಡಳಿತ ಈ ಕಾಡುಪ್ರಾಣಿ ದಾಳಿ ಪ್ರಕರಣವನ್ನು ಹಗುರುವಾಗಿ ಪರಿಗಣಿಸಿರುವುದು ಕಂದಗನೂರು, ಚಿರ್ಚನಕಲ್, ಮುದೂರು, ಯರಝರಿ, ಚಲಮಿ, ಹಂಡರಗಲ್, ನಾಗರಾಳ , ಹರಿಂದ್ರಾಳ ಗ್ರಾಮಗಳ ರೈತರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿ ಕಾಡುಪ್ರಾಣಿ ಪತ್ತೆ ಹಚ್ಚಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600