Rain effect: Tree fell due to heavy rain, crop flooded

Rain effect: ಭಾರೀ ಮಳೆಗೆ ಉರುಳಿಬಿದ್ದ ಮರ, ಬೆಳೆ ಜಲಾವೃತ (ವಿಡಿಯೋ ನೋಡಿ)

Rain effect: ಭಾರೀ ಮಳೆಗೆ ಉರುಳಿಬಿದ್ದ ಮರ, ಬೆಳೆ ಜಲಾವೃತ (ವಿಡಿಯೋ ನೋಡಿ)

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆ, ಬೀಸಿದ ಬಿರುಗಾಳಿಗೆ ಹಲವೆಡೆ ಬೆಳೆಗಳು ನೆಲಕ್ಕಚ್ಚಿದ್ದು (Rain update) ಮರವೊಂದು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ವರದಿಯಾಗಿದೆ.

Join Our Telegram: https://t.me/dcgkannada

ತಾಲ್ಲೂಕಿನ ಇಂಗಳಗೇರಿ ಗ್ರಾಮದಲ್ಲಿ ಶಂಕರಗೌಡ ಪಾಟೀಲ್ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಭಾರೀ ಬಿರುಗಾಳಿಗೆ ನೆಲಕ್ಕಚ್ಚಿದ್ದು ಲಕ್ಷಾಂತರ ರೂಪಾಯಿ ಕಬ್ಬು ಬೆಳೆ ಹಾನಿಯಾಗಿದೆ. (Rain update)

ಗುಡ್ನಾಳದಿಂದ ಇಂಗಳಗೇರಿಗೆ ಹೋಗುವ ರಸ್ತೆ ಮಧ್ಯೆ ಆಲದ ಗಿಡವೊಂದು ಉರುಳಿ ಬಿದ್ದು ಎರಡು ಗ್ರಾಮಗಳ ಸಂಪರ್ಕ ಅರ್ಧ ದಿನ ಬಂದ್ ಆಗಿತ್ತು.ಬಳಿಕ ಅರಣ್ಯ ಇಲಾಖೆ,ಪಂಚಾಯಿತಿಯವರು ಹಾಗೂ ಸ್ಥಳೀಯ ರೈತರ ಸಹಾಯದಿಂದ ರಸ್ತೆ ಮಧ್ಯೆ ಬಿದ್ದಿದ್ದ ಗಿಡವನ್ನು ತೆರವುಗೊಳಿಸಲಾಯಿತು.

ಮಧ್ಯರಾತ್ರಿ ಸುರಿದ ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಳಿಸಲಾಯಿತು. ಮಧ್ಯರಾತ್ರಿಯೂ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಮಾಡಲು ನಿದ್ದೆಬಿಟ್ಟು ಕೆಲಸ ಮಾಡಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಬೆಳೆ ಜಲಾವೃತ :

ತಾಲ್ಲೂಕಿನ ನಾಗರಬೆಟ್ಟ ಗ್ರಾಮದ ಮಾಳಪ್ಪ ಮುರಾಳ ಅವರ ಸರ್ವೆ ನಂ.102/2ರಲ್ಲಿ ಬೆಳೆದಿದ್ದ ತೊಗರಿ ಬೆಳೆ ಜಲಾವೃತಗೊಂಡಿದೆ.

ಅರಸನಾಳದಿಂದ ನಾಗರಬೆಟ್ಟದವರೆಗೆ ಕಾಲುವೆ ಕಾಮಗಾರಿ ಕೈಗೊಳ್ಳದೇ ಇರುವುದರಿಂದ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾಳಾಗುತ್ತಿದೆ.ಇದಕ್ಕೆ ಸರ್ಕಾರ ಕೂಡಲೇ ಮಧ್ಯೆಪ್ರವೇಶಿಸಿ ಪರಿಹಾರ ನೀಡಬೇಕು ಎಂದು ರೈತ ಮಾಳಪ್ಪ ಮುರಾಳ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ BSYಗೆ ಬಿಗ್ ರಿಲೀಫ್!

ಇನ್ನುಳಿದಂತೆ ಮುದ್ದೇಬಿಹಾಳ ತಾಲ್ಲೂಕಿನ ಬಹುತೇಕ ಎಲ್ಲ ಕಡೆ ಮಳೆಯಾಗಿದ್ದು ಜಮೀನುಗಳಲ್ಲಿ ನೀರು ಸಂಗ್ರಹವಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ