CM, DCM high level meeting in Delhi.. What is the next step

ದೆಹಲಿಯಲ್ಲಿ CM, DCM ಉನ್ನತ ಮಟ್ಟದ ಸಭೆ.. ಮುಂದಿನ ನಡೆ ಏನು?

ದೆಹಲಿಯಲ್ಲಿ CM, DCM ಉನ್ನತ ಮಟ್ಟದ ಸಭೆ.. ಮುಂದಿನ ನಡೆ ಏನು?

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮೂಡ ಪ್ರಕರಣದ ಕುರಿತು ಮಾತುಕತೆ ನಡೆಸಿದ್ದಾರೆ.

Join Our Telegram: https://t.me/dcgkannada

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಉಪಸ್ಥಿತರಿದ್ದರು.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತುಕತೆ ನಡೆದ ಕುರಿತು, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಾಪಾಲರು ತನಿಖೆಗೆ ಅನುಮತಿ ನೀಡಿರುವ ಕುರಿತು ಮುಂದಿನ ಕಾನೂನು ನಡೆ ಬಗ್ಗೆ ಚರ್ಚಿಸಲಾಗಿದೆ. ಮುಡಾದಲ್ಲಿ ನನ್ನ ಪಾತ್ರವಿಲ್ಲ. ಕಾನೂನು ರೀತಿಯಲ್ಲಿ 14 ಸೈಟ್ ಪಡೆದಿದ್ದೇವೆ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೇ, ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಿಂದಿನ ಹಗರಣಗಳ ಕುರಿತಾಗಿ ಮತ್ತು ರಾಜ್ಯಪಾಲರ ಬಳಿ ದೋಸ್ತಿ ನಾಯಕರ ಕೆಲ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ಬಾಕಿ ಇರುವ ಸಂಗತಿಗಳನ್ನು ರಾಜ್ಯ ನಾಯಕರು ವರಿಷ್ಠರಿಗೆ ವರದಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Who after modi? ಮೋದಿ ನಂತರ ಪ್ರಧಾನಿ ಯಾರು..? ಸಮೀಕ್ಷೆ ಬಹಿರಂಗ..!

ಇನ್ನು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಖಂಡಿಸಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನಡೆ ವಿರೋಧಿಸಿ ಕೈಗೊಂಡ ಸಂಪುಟ ನಿರ್ಣಯಗಳ ಬಗ್ಗೆ ವರಿಷ್ಠರಿಗೆ ರಾಜ್ಯ ನಾಯಕರು ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು