The land records given to lease were altered and purchased by crooks: Veeranna Charantimath accused

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

ಹುನಗುಂದ: ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶಾಲೆಯ ಆವರಣಕ್ಕೆ 99 ವರ್ಷ ಮೂರು ಎಕರೆ ಆರು ಗುಂಟೆ ಲೀಸ್ ನೀಡಿದ ಜಾಗೆಯನ್ನು ಖಾಸಗಿ ಇಬ್ಬರು ವ್ಯಕ್ತಿಗಳು ಅಧಿಕಾರ ದುರಪಯೋಗ ಪಡಿಸಿಕೊಂಡು ಲೀಸ್ ಅಂತ ಇದ್ದಿದನ್ನು ಅಳಿಸಿ ಖುಷ್ಕಿ ಜಮೀನು ಅಂತ ಜಾಗೆಯನ್ನು ಖರೀದಿ ಮಾಡಿಕೊಂಡಿದ್ದಾರೆ ಎಂದು ವಿ.ಮ.ವಿ.ವ ಸಂಘದ ಕಾಯಾಧ್ಯಕ್ಷ ವೀರಣ್ಣ ಚರಂತಿಮಠ ಆರೋಪಿಸಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವಿ.ವ ಸಂಘದ ಕಾರ್ಯಾಲಯದಲ್ಲಿ ಗುರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲಕಲ್ಲ ವಿಜಯ ಮಹಾಂತೇಶ ಸ್ವಾಮಿಗಳು ಅದರ ಅಧ್ಯಕ್ಷತೆಯಲ್ಲಿ ಮಾರ್ಗದರ್ಶನದಲ್ಲಿ ಈ ಸಂಸ್ಥೆಯು ನಡೆಯುತ್ತಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದ ಈ ಸಂಸ್ಥೆ ಒಂದು ಸಾರ್ವಜನಿಕವಾದ ಈ ಸಂಸ್ಥೆಯಾಗಿದೆ ಎಂದರು.

ನಾಲ್ಕು ಕ್ಯಾಂಪಸ್‌ಗಳನ್ನು ಹೊಂದಿದ್ದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘಕ್ಕೆ 99 ವರ್ಷಗಳ ವರೆಗೆ ಲೀಸ್ ನೀಡಿದ ಬಿಂದುರಾವ್ ಕುಲಕರ್ಣಿ ನೀಡಿದ ರಿ.ಸ.ನಂ ೪೫೮/೧ ಕ್ಷೇತ್ರ ೩ ಎಕರೆ ೬ ಗುಂಟೆ ಮೊದಲು ಲೀಸ್ ಜಮೀನು ಇದ್ದು, ಶಾಲೆಯ ಆಟದ ಮೈದಾನ ಎಂದು ನೊಂದನೆಯಾಗಿದೆ ಎಂದರು.

ಕುಲಕರ್ಣಿಯವರ ಕುಟುಂಬಸ್ಥರು ನಾಲ್ಕು ಜನರು ಸಂಸ್ಥೆಗೆ ೨೦೦೧ ರಲ್ಲಿ ೫೦ ಸಾವಿರವನ್ನು ತೆಗೆದುಕೊಂಡು ಸಂಸ್ಥೆಗೆ ಬಿಟ್ಟು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರು ಖಾಸಗಿ ವ್ಯಕ್ತಿಗಳು ಇನ್ನೂ ೨೨ ವರ್ಷ ಲೀಸ್ ಇದ್ದರೂ ಈ ರೀತಿಯಾಗಿ ಉದ್ದಟತನದ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಕೋರ್ಟನಲ್ಲಿ ರಾಜೀಯಾಗಿ ಡಿಗ್ರಿಯಾಗಿದೆ. ಸಂಸ್ಥೆಯ ಆವರಣ ಅಂತ ಆಗಿದೆ. ಅಧಿಕಾರ ಇದೆ ಅಂತ ಯಾವುದೇ ಉದ್ದಟತನ ಕೆಲಸವನ್ನು ಯಾರೂ ಮಾಡಬಾರದು ಈಗಾಗಲೇ ಕರ್ನಾಟಕ ಹೈಕೋಟ್ ತಡೆಯಾಜ್ಞೆಯನ್ನು ನೀಡಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಿಗೆ ಇಬ್ಬರಿಗೆ ಬೋಗಸ್ ಅಟ್ರಾಸಿಟಿ ಕೇಸ್ ಅವರು ಮಾಡಲಾಗಿದ್ದು. ಬೋಗಸ್ ಇದ್ದಾಗ ಯಾರನ್ನು ಅರೆಸ್ಟ್ ಮಾಡಲು ಬರುವುದಿಲ್ಲ ಕಾನೂನು ಕೇಳಿದ್ದೇವೆ. ಗುರವಾರ ರಾತ್ರಿ ಏಕಾಏಕಿಯಾಗಿ ಶಾಲೆಯ ಕೌಂಪೋಡನ್ನು ಎರಡು ಜೆಸಿಬಿ ಮತ್ತು ಹಿಟ್ಯಾಚಿಯಿಂದ ನಂಬರ ಪ್ಲೇಟ್ ತೆಗೆದು ಕೌಂಪೋಡ್ ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ಅವರ ಮೇಲೆ ನೂರಕ್ಕೆ ನೂರರಷ್ಟು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇರುವಾಗ ಈ ರೀತಿಯಾಗಿ ಮಾಡಿದಾಗ ಅವರ ಮೇಲೆ ಸೂಕ್ತ ಕ್ರಮವಹಿದ್ದೇವೆ ಎಂದರು.

ಅಧಿಕಾರಿಗಳು ಯಾರದೋ ಮಾತು ಕೇಳಿ ಕಾನೂನು ಬಿಟ್ಟು ಕೆಲಸ ಮಾಡಿದರೆ, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬದ್ಧವಾದ ಕೆಲಸವನ್ನು ಮಾತ್ರ ಮಾಡಬೇಕು. ಅಧಿಕಾರ ಮತ್ತು ಸರ್ಕಾರ ಇಂದು ಇರುತ್ತೇ ನಾಳೆ ಹೋಗುತ್ತೆದೆ. ಆದ್ದರಿಂದ ಅಧಿಕಾರಿಗಳು ಕಾನೂನು ಮೀರಿ ಕೆಲಸವನ್ನು ಯಾವುದೇ ಕಾರಣಕ್ಕೆ ಮಾಡಬಾರದು ಎಂದರು.

ಬೇರೆಯವರ ಮಾತು ಕೇಳಿ ಕೆಲಸವನ್ನು ಮಾಡಿದರೆ ಅಧಿಕಾರಿಗಳೇ ನೇರ ಹೋಣೆಯನ್ನು ಮಾಡಲಾಗುವುದು. ಕಾನೂನು ಬಿಟ್ಟು ನಾವು ಏನು ಮಾಡುವುದಿಲ್ಲ ಕಾನೂನು ಪ್ರಕಾರ ಕ್ರಮವಹಿಸಿ ಕೆಲ¸ವನ್ನು ಸಂಸ್ಥೆಯ ಹಿತದೃಷ್ಟಿಯಿಂದ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Astrology: ಹಣದ ವಿಚಾರದಲ್ಲಿ ಇಂದು ನೀವು ಜಾಗರೂಕರಾಗಿ ಇರುವುದು ಉತ್ತಮ

ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ನಿರ್ದೇಶಕರಾದ ಅರುಣೋದಯ ದುದ್ಗಿ, ರವಿ ಹುಚನೂರ , ಬಸವರಾಜ ಕೆಂದೂರ, ಮಹಾಂತೇಶ ಕತ್ತಿ ಇತರರು ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ