Consumer Accident Insurance Payment by bank itself

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಮುದ್ದೇಬಿಹಾಳ : ಗ್ರಾಹಕರಿಗೆ ಬಡ್ಡಿ ಹೊರೆ ಆಗಬಾರದು ಎಂಬ ಕಾರಣಕ್ಕೆ ಲಾಭಾಂಶದ ಪ್ರಮಾಣ ಹೆಚ್ಚಿಸಿಲ್ಲ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಏಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು 395.65 ಲಕ್ಷ ರೂ.ಆದಾಯ ಗಳಿಸಿದ್ದು ಅದರಲ್ಲಿ ನಿವ್ವಳ 96.87 ಲಕ್ಷ ರೂ.ಲಾಭ ಗಳಿಸಿದೆ.ಪ್ರಸಕ್ತ ಸಾಲಿನಲ್ಲಿ ಎಲ್ಲ ಸದಸ್ಯರಿಗೆ ಅಪಘಾತ ವಿಮೆ ಸೌಲಭ್ಯ ಕಲ್ಪಿಸುತ್ತಿದ್ದು ಅದಕ್ಕೆ ತಗಲುವ ವಿಮೆ ಕಂತಿನ ಹಣವನ್ನು ಪ್ರತಿ ವರ್ಷ ಬ್ಯಾಂಕಿನಿಂದಲೇ ಭರಣಾ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ.

9268 ಸದಸ್ಯರಿಗೆ ವಿಮೆ ಪಾವತಿಸಲಾಗುತ್ತಿದೆ. ಅಪಘಾತವಾಗಿ ಅಂಗವೈಕಲ್ಯ ಉಂಟಾದರೆ ಒಂದು ಲಕ್ಷ,ಮೃತಪಟ್ಟರೆ ಎರಡು ಲಕ್ಷ ರೂ.ಮೃತರ ಅವಲಂಬಿತರಿಗೆ ವಿಮಾ ಕಂಪನಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಹಕರಾದ ಬಸನಗೌಡ ಪಾಟೀಲ್, ಬಾಬು ಬಿರಾದಾರ, ಶರಣಯ್ಯ ಹಿರೇಮಠ, ಬಿ.ಎಸ್.ಮೇಟಿ ಮಾತನಾಡಿ, ಬ್ಯಾಂಕಿನಿಂದ ಕಳೆದ ಮೂರು ವರ್ಷಗಳಿಂದ ಗ್ರಾಹಕರಿಗೆ ಲಾಭಾಂಶದ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದ್ದರೂ ಅದನ್ನು ಈಡೇರಿಸಿಲ್ಲ. ಡಿವ್ಹಿಡೆಂಡ್ ಹೆಚ್ಚಿಸಿ ಎಂದು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಅಧ್ಯಕ್ಷ ಓಸ್ವಾಲ್,ನಮ್ಮ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳುವ ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿ ಅದರಿಂದ ಬಂದ ಆದಾಯವನ್ನು ಲಾಭಾಂಶದ ರೂಪದಲ್ಲಿ ಹೆಚ್ಚಿಸಿಕೊಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಹಿರಿಯ ನಿರ್ದೇಶಕರಾದ ಎಸ್.ಎಸ್.ಮಾಲಗತ್ತಿ, ವೆಂಕನಗೌಡ ಪಾಟೀಲ್ ಮಾತನಾಡಿದರು.

ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರಾಜಶೇಖರ ಕರಡ್ಡಿ, ಪ್ರಭುದೇವ ಕಲ್ಬುರ್ಗಿ, ರುದ್ರಪ್ಪ ಕಡಿ, ಜಿ.ಬಿ.ಪಾಟೀಲ್, ಶ್ರೀದೇವಿ ಮದರಿ, ವೃತ್ತಿಪರ ನಿರ್ದೇಶಕ ಸುನೀಲ ಇಲ್ಲೂರ ಇದ್ದರು.

ಇದನ್ನೂ ಓದಿ: ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ವೃತ್ತಿಪರ ನಿರ್ದೇಶಕ ನಾಗಭೂಷಣ ನಾವದಗಿ ಸ್ವಾಗತಿಸಿದರು. ಎಂ.ಕೆ.ರಾಯಗೊಂಡ ಸುಮಾ ನಾಡಗೌಡ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ