Consumer Accident Insurance Payment by bank itself

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಮುದ್ದೇಬಿಹಾಳ : ಗ್ರಾಹಕರಿಗೆ ಬಡ್ಡಿ ಹೊರೆ ಆಗಬಾರದು ಎಂಬ ಕಾರಣಕ್ಕೆ ಲಾಭಾಂಶದ ಪ್ರಮಾಣ ಹೆಚ್ಚಿಸಿಲ್ಲ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಏಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು 395.65 ಲಕ್ಷ ರೂ.ಆದಾಯ ಗಳಿಸಿದ್ದು ಅದರಲ್ಲಿ ನಿವ್ವಳ 96.87 ಲಕ್ಷ ರೂ.ಲಾಭ ಗಳಿಸಿದೆ.ಪ್ರಸಕ್ತ ಸಾಲಿನಲ್ಲಿ ಎಲ್ಲ ಸದಸ್ಯರಿಗೆ ಅಪಘಾತ ವಿಮೆ ಸೌಲಭ್ಯ ಕಲ್ಪಿಸುತ್ತಿದ್ದು ಅದಕ್ಕೆ ತಗಲುವ ವಿಮೆ ಕಂತಿನ ಹಣವನ್ನು ಪ್ರತಿ ವರ್ಷ ಬ್ಯಾಂಕಿನಿಂದಲೇ ಭರಣಾ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ.

9268 ಸದಸ್ಯರಿಗೆ ವಿಮೆ ಪಾವತಿಸಲಾಗುತ್ತಿದೆ. ಅಪಘಾತವಾಗಿ ಅಂಗವೈಕಲ್ಯ ಉಂಟಾದರೆ ಒಂದು ಲಕ್ಷ,ಮೃತಪಟ್ಟರೆ ಎರಡು ಲಕ್ಷ ರೂ.ಮೃತರ ಅವಲಂಬಿತರಿಗೆ ವಿಮಾ ಕಂಪನಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಹಕರಾದ ಬಸನಗೌಡ ಪಾಟೀಲ್, ಬಾಬು ಬಿರಾದಾರ, ಶರಣಯ್ಯ ಹಿರೇಮಠ, ಬಿ.ಎಸ್.ಮೇಟಿ ಮಾತನಾಡಿ, ಬ್ಯಾಂಕಿನಿಂದ ಕಳೆದ ಮೂರು ವರ್ಷಗಳಿಂದ ಗ್ರಾಹಕರಿಗೆ ಲಾಭಾಂಶದ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದ್ದರೂ ಅದನ್ನು ಈಡೇರಿಸಿಲ್ಲ. ಡಿವ್ಹಿಡೆಂಡ್ ಹೆಚ್ಚಿಸಿ ಎಂದು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಅಧ್ಯಕ್ಷ ಓಸ್ವಾಲ್,ನಮ್ಮ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳುವ ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿ ಅದರಿಂದ ಬಂದ ಆದಾಯವನ್ನು ಲಾಭಾಂಶದ ರೂಪದಲ್ಲಿ ಹೆಚ್ಚಿಸಿಕೊಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಹಿರಿಯ ನಿರ್ದೇಶಕರಾದ ಎಸ್.ಎಸ್.ಮಾಲಗತ್ತಿ, ವೆಂಕನಗೌಡ ಪಾಟೀಲ್ ಮಾತನಾಡಿದರು.

ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರಾಜಶೇಖರ ಕರಡ್ಡಿ, ಪ್ರಭುದೇವ ಕಲ್ಬುರ್ಗಿ, ರುದ್ರಪ್ಪ ಕಡಿ, ಜಿ.ಬಿ.ಪಾಟೀಲ್, ಶ್ರೀದೇವಿ ಮದರಿ, ವೃತ್ತಿಪರ ನಿರ್ದೇಶಕ ಸುನೀಲ ಇಲ್ಲೂರ ಇದ್ದರು.

ಇದನ್ನೂ ಓದಿ: ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ವೃತ್ತಿಪರ ನಿರ್ದೇಶಕ ನಾಗಭೂಷಣ ನಾವದಗಿ ಸ್ವಾಗತಿಸಿದರು. ಎಂ.ಕೆ.ರಾಯಗೊಂಡ ಸುಮಾ ನಾಡಗೌಡ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600