High Court judges meet.. Social coexistence is possible through law: Justice M.Y. Arun

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ ನೀಡಿ ಅವರು ಇಲ್ಲಿನ ವಕೀಲರ ಸಂಘದಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕೀಲರು ನ್ಯಾಯಾಲಯದಲ್ಲಿ ಕೇಸ್ ಒಂದನ್ನು ನಡೆಸುತ್ತಿರುವಾಗ ಆ ಕಕ್ಷಿದಾರರು ತಮ್ಮ ಕುಟುಂಬದ ಸದಸ್ಯರಂತೆ ವಕೀಲರನ್ನು ಕಾಣುತ್ತಾರೆ. ಅವರಿಗೆ ಸರಿಯಾದ ದಾರಿ ತೋರುವುದು ವಕೀಲರ ಕರ್ತವ್ಯವಾಗಿದೆ ಎಂದರು.

ಕೇವಲ ವಕೀಲ ವೃತ್ತಿಯ ಜೊತೆಗೆ ಬೇರೆ ಬೇರೆ ವೃತ್ತಿಯನ್ನು ಕೈಗೊಳ್ಳುವ ಅವಶ್ಯಕತೆ ಗ್ರಾಮೀಣ ಭಾಗದಲ್ಲಿರುವ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇದೆ. ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು ಮುದ್ದೇಬಿಹಾಳದಲ್ಲಿಯೇ ಕೂತು ಕಲಬುರಗಿ, ಬೆಂಗಳೂರು ಕೋರ್ಟ್ನಲ್ಲಿ ಕೇಸ್ ನಡೆಸಬಹುದಾಗಿದೆ. ಅಂತಹ ತಂತ್ರಜ್ಞಾನದ ಬಳಕೆಯನ್ನು ನುರಿತ ತಜ್ಞರಿಂದ ತಿಳಿದು ಅದನ್ನು ಅನುಷ್ಠಾನಕ್ಕೆ ತಂದರೆ ವಕೀಲರ ವೃತ್ತಿಪರತೆಯಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ. ಪೇಪರ್‌ಲೆಸ್ ಕೋರ್ಟ್ ನಡೆಸುವ ಕಾರ್ಯಕ್ಕೆ ವಕೀಲರು ಒತ್ತು ನೀಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ನಮ್ಮ ಭಾಗದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಈ ಕಟ್ಟಡ ಈಗಿನ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಸದ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರ ಶ್ರಮದಿಂದ ನಿರ್ಮಾಣವಾಗಿದೆ.ಲಾಯರ್ ಚೇಂರ‍್ಸ್ ಹಾಗೂ ಎಪಿಪಿ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು ಅದರ ಲೋಕಾರ್ಪಣೆಗೆ ಶೀಘ್ರ ಆಗಲಿದೆ.ಜಿಲ್ಲಾ ನ್ಯಾಯಾಲಯದ ಬೇಡಿಕೆ, ತಾಳಿಕೋಟಿಯಲ್ಲಿ ಕಾಯಂ ಕೋರ್ಟ್ ಸ್ಥಾಪನೆ ಬಗ್ಗೆ ಆದಷ್ಟು ಬೇಗ ಕಾರ್ಯಗತಗೊಳಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಸಂಪತ್ತಕುಮಾರ ಬಳೂಲಗಿಡದ, ಮಲ್ಲಿಕಾರ್ಜುನ ಅಂಬಲಿ, ಅರವಿಂದ ಹಾಗರಗಿ ಇದ್ದರು.

ಇದನ್ನೂ ಓದಿ: ಸೆ.29 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ವಕೀಲರಾದ ಎಚ್.ಜಿ.ನಾಗೋಡ ಸ್ವಾಗತಿಸಿದರು. ಎನ್.ಆರ್.ಮೊಕಾಶಿ ನಿರೂಪಿಸಿದರು. ಎಸ್.ಜಿ.ಕುಲಕರ್ಣಿ ಪರಿಚಯಿಸಿದರು.

ಇದಕ್ಕೂ ಮುನ್ನ ಮುದ್ದೇಬಿಹಾಳದ ನ್ಯಾಯಾಲಯದ ಕಟ್ಟಡ ಹಾಗೂ ಲಾರ‍್ಸ್ ಚೇಂರ‍್ಸ್,ಎಪಿಪಿ ನೂತನ ಕಟ್ಟಡವನ್ನು ನ್ಯಾಯಮೂರ್ತಿ ಅರುಣ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುದ್ದೇಬಿಹಾಳಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ವಕೀಲರ ಸಂಘದವರು ಸನ್ಮಾನಿಸಿದರು.


ಕಾರ್ಯಕ್ರಮ ನಿಗದಿಯಾಗಿದ್ದು ಬೆಳಗ್ಗೆ 11 ಗಂಟೆಗೆ ಇದ್ದರೂ ಬ.ಬಾಗೇವಾಡಿ ಕಾರ್ಯಕ್ರಮ ಮುಗಿಸಿಕೊಂಡು ಬರುವಷ್ಟರಲ್ಲೇ ಮದ್ಯಾಹ್ನ 3.20ರ ಹೊತ್ತಾಗಿತ್ತು. ನ್ಯಾಯಾಲಯದ ಕಟ್ಟಡ ವೀಕ್ಷಣೆ ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಯಮೂರ್ತಿಗಳು ತಮ್ಮ ಭಾಷಣದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ವಕೀಲ ವೃಂದದವರಲ್ಲಿ ಕ್ಷಮೆ ಕೋರಿದರು.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ