High Court judges meet.. Social coexistence is possible through law: Justice M.Y. Arun

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ ನೀಡಿ ಅವರು ಇಲ್ಲಿನ ವಕೀಲರ ಸಂಘದಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕೀಲರು ನ್ಯಾಯಾಲಯದಲ್ಲಿ ಕೇಸ್ ಒಂದನ್ನು ನಡೆಸುತ್ತಿರುವಾಗ ಆ ಕಕ್ಷಿದಾರರು ತಮ್ಮ ಕುಟುಂಬದ ಸದಸ್ಯರಂತೆ ವಕೀಲರನ್ನು ಕಾಣುತ್ತಾರೆ. ಅವರಿಗೆ ಸರಿಯಾದ ದಾರಿ ತೋರುವುದು ವಕೀಲರ ಕರ್ತವ್ಯವಾಗಿದೆ ಎಂದರು.

ಕೇವಲ ವಕೀಲ ವೃತ್ತಿಯ ಜೊತೆಗೆ ಬೇರೆ ಬೇರೆ ವೃತ್ತಿಯನ್ನು ಕೈಗೊಳ್ಳುವ ಅವಶ್ಯಕತೆ ಗ್ರಾಮೀಣ ಭಾಗದಲ್ಲಿರುವ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇದೆ. ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು ಮುದ್ದೇಬಿಹಾಳದಲ್ಲಿಯೇ ಕೂತು ಕಲಬುರಗಿ, ಬೆಂಗಳೂರು ಕೋರ್ಟ್ನಲ್ಲಿ ಕೇಸ್ ನಡೆಸಬಹುದಾಗಿದೆ. ಅಂತಹ ತಂತ್ರಜ್ಞಾನದ ಬಳಕೆಯನ್ನು ನುರಿತ ತಜ್ಞರಿಂದ ತಿಳಿದು ಅದನ್ನು ಅನುಷ್ಠಾನಕ್ಕೆ ತಂದರೆ ವಕೀಲರ ವೃತ್ತಿಪರತೆಯಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ. ಪೇಪರ್‌ಲೆಸ್ ಕೋರ್ಟ್ ನಡೆಸುವ ಕಾರ್ಯಕ್ಕೆ ವಕೀಲರು ಒತ್ತು ನೀಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ನಮ್ಮ ಭಾಗದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಈ ಕಟ್ಟಡ ಈಗಿನ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಸದ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರ ಶ್ರಮದಿಂದ ನಿರ್ಮಾಣವಾಗಿದೆ.ಲಾಯರ್ ಚೇಂರ‍್ಸ್ ಹಾಗೂ ಎಪಿಪಿ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು ಅದರ ಲೋಕಾರ್ಪಣೆಗೆ ಶೀಘ್ರ ಆಗಲಿದೆ.ಜಿಲ್ಲಾ ನ್ಯಾಯಾಲಯದ ಬೇಡಿಕೆ, ತಾಳಿಕೋಟಿಯಲ್ಲಿ ಕಾಯಂ ಕೋರ್ಟ್ ಸ್ಥಾಪನೆ ಬಗ್ಗೆ ಆದಷ್ಟು ಬೇಗ ಕಾರ್ಯಗತಗೊಳಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಸಂಪತ್ತಕುಮಾರ ಬಳೂಲಗಿಡದ, ಮಲ್ಲಿಕಾರ್ಜುನ ಅಂಬಲಿ, ಅರವಿಂದ ಹಾಗರಗಿ ಇದ್ದರು.

ಇದನ್ನೂ ಓದಿ: ಸೆ.29 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ವಕೀಲರಾದ ಎಚ್.ಜಿ.ನಾಗೋಡ ಸ್ವಾಗತಿಸಿದರು. ಎನ್.ಆರ್.ಮೊಕಾಶಿ ನಿರೂಪಿಸಿದರು. ಎಸ್.ಜಿ.ಕುಲಕರ್ಣಿ ಪರಿಚಯಿಸಿದರು.

ಇದಕ್ಕೂ ಮುನ್ನ ಮುದ್ದೇಬಿಹಾಳದ ನ್ಯಾಯಾಲಯದ ಕಟ್ಟಡ ಹಾಗೂ ಲಾರ‍್ಸ್ ಚೇಂರ‍್ಸ್,ಎಪಿಪಿ ನೂತನ ಕಟ್ಟಡವನ್ನು ನ್ಯಾಯಮೂರ್ತಿ ಅರುಣ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುದ್ದೇಬಿಹಾಳಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ವಕೀಲರ ಸಂಘದವರು ಸನ್ಮಾನಿಸಿದರು.


ಕಾರ್ಯಕ್ರಮ ನಿಗದಿಯಾಗಿದ್ದು ಬೆಳಗ್ಗೆ 11 ಗಂಟೆಗೆ ಇದ್ದರೂ ಬ.ಬಾಗೇವಾಡಿ ಕಾರ್ಯಕ್ರಮ ಮುಗಿಸಿಕೊಂಡು ಬರುವಷ್ಟರಲ್ಲೇ ಮದ್ಯಾಹ್ನ 3.20ರ ಹೊತ್ತಾಗಿತ್ತು. ನ್ಯಾಯಾಲಯದ ಕಟ್ಟಡ ವೀಕ್ಷಣೆ ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಯಮೂರ್ತಿಗಳು ತಮ್ಮ ಭಾಷಣದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ವಕೀಲ ವೃಂದದವರಲ್ಲಿ ಕ್ಷಮೆ ಕೋರಿದರು.

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.