Come tomorrow Adapurakka.. Rajugowda Patil rants in one sentence

ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತ್ತಿದ್ದೇನೆ.. ಬಾ ನಾಳೆ ಆದಾಪೂರಕ್ಕ.. ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ (ವಿಡಿಯೋ ನೋಡಿ)

ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತ್ತಿದ್ದೇನೆ.. ಬಾ ನಾಳೆ ಆದಾಪೂರಕ್ಕ.. ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ (ವಿಡಿಯೋ ನೋಡಿ)

ಇಳಕಲ್: “** ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತ್ತಿದ್ದೇನೆ” ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ಮಗನಾದ ರಾಜುಗೌಡ ಪಾಟೀಲ್ ಅವರು ಸವಾಲು ಹಾಕಿದರು.

Join Our Telegram: https://t.me/dcgkannada

ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ಸಾಮಾಜಿಕ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು.

“ಇಂದು ನಾನು ರಾಜಕೀಯ ಮಾತನಾಡಲು ಬಂದಿರಲಿಲ್ಲ. ಆದರೆ, ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಸುದ್ದಿಗೋಷ್ಠಿಯಲ್ಲಿ ನಮ್ಮ ತಂದೆಯವರಿಗೆ ದೊಡ್ಡನಗೌಡ ನೀ ದಡ್ಡ ಎಂದು ನಿಂದಿಸಿದ ಕಾರಣ ರಾಜಕೀಯ ಮಾತನಾಡಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ” ಎಂದು ಮಾತು ಆರಂಭಿಸಿದರು.

“ನಾವು ಇಳಕಲ್ ನಲ್ಲಿ ಇರುವವರು. ಬಾಯಿಗೆ ಬಂದಂಗ ಮಾತನಾಡಿದರೆ ಸುಮ್ಮನೆ ಕೂರಲು ಆಗಲ್ಲ. ಇನ್ನು ಮುಂದೆ ನೀ ಬೊಗಳು.. ನಾನು ನೋಡ್ತಿನಿ…” ಎಂದು ಎಚ್ಚರಿಕೆ ರೀತಿ ಮಾತನಾಡಿದರು.

“ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು, ಬಾಯಿಗೆ ಬಂದಂಗ ಮಾತನಾಡುತ್ತಾ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಯಾ? ನಾಳೆ‌ ಚಿಕ್ಕ ಆದಾಪೂರ ಗ್ರಾಮಕ್ಕೆ ಬರ್ತಿಯಲ್ಲ… ಬಾ.. ಏನು ಮಾಡ್ತಿ ನೋಡ್ತಿವಿ” ಎಂದು ಗುಡುಗಿದರು.

ವಾಗ್ವಾದಕ್ಕೆ ಕಾರಣ ಏನು?

ಇಳಕಲ್ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಂತರ ಶಾಸಕರು ಮತ್ತು ಮಾಜಿ‌ ಶಾಸಕರ ನಡುವಿನ ವಾಕ್ಸಮರ ಜೋರಾಗಿದೆ. ಈಗ ಮಾಜಿ ಶಾಸಕ ದೊಡ್ಡನಗೌಡ ಅವರ ಮಗನೂ ಮಾತಿನ ಮಲ್ಲ ಯುದ್ಧಕ್ಕೆ ಮತ್ತೆ ಪ್ರವೇಶವನ್ನು ಚಿಕ್ಕ ಆದಾಪೂರ ಗ್ರಾಮದಿಂದ‌ ಮಾಡಿದ್ದಾರೆ.

ಬಿಜೆಪಿ ನಾಯಕತ್ವ ಯಾರದ್ದು?

ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೂ ಹೀಗೆ ಮಾತಿನ ಯುದ್ಧ ನಡೆಸಿದ್ದ ಕಾಶಪ್ಪನವರ ಮತ್ತು ದೊಡ್ಡನಗೌಡ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ಸು ಕಂಡಿದ್ದರು. ಈಗ ತಾಲೂಕು ಬಿಜೆಪಿ ನಾಯಕತ್ವ ಚರ್ಚೆ ಜೋರಾಗಿರುವಾಗಲೇ ಮಾಜಿ ಶಾಸಕರು ತಮ್ಮ ಮಗನನ್ನು ಮತ್ತೆ ಮುನ್ನೆಲೆಗೆ ತರಲು ಮುಂದಾಗಿದ್ದಾರಾ ಎಂಬ ಚರ್ಚೆ ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಏತನ್ಮಧ್ಯೆ, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರಿಸಿದ ನಂತರ ಎಸ್. ಆರ್. ನವಲಿಹಿರೇಮಠ ಅವರೂ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಬಿಜೆಪಿ ನಾಯಕತ್ವ ಯಾರ ಬಳಿ ಉಳಿಯುತ್ತದೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ