Big victory for Congress.. Another embarrassment for BJP

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಹುನಗುಂದ: ಇಳಕಲ್ ನಗರಸಭೆ, ಹುನಗುಂದ ಪಿಎಲ್ಡಿ ಬ್ಯಾಂಕ್ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಸೋಲಿಸಿ ರುಚಿ ತೋರಿಸುವಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಯಶಸ್ಸು ಕಂಡಿದ್ದಾರೆ.

ಹೌದು, ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ರಾಜವ್ವ ಹನಮಪ್ಪ ಬಾದಾಮಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.

Join Our Telegram: https://t.me/dcgkannada

ಪುರುಸಭೆಯ ಒಟ್ಟು 23 ಸದಸ್ಯರ ಬಲವುಳ್ಳ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಶ್ರೀ ರೇವಡಿ ಅವರು ಸ್ಪರ್ಧಿಸಿ ಕಾಂಗ್ರೆಸ್ 12 ಮತಗಳೊಂದಿಗೆ ಬಿಜೆಪಿಯ ಒಬ್ಬರು ಜೆಡಿಎಸ್ ನ ಇಬ್ಬರು ಸದಸ್ಯರು ಹಾಗೂ ಶಾಸಕರ ಒಂದು ಮತವು ಸೇರಿದಂತೆ ಒಟ್ಟು 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಬಿಜೆಪಿಯ ಬಸವ್ವ ಬಸಪ್ಪ ಚಿತ್ತಾವಾಡಗಿ ೮ ಮತಗಳನ್ನ ಪಡೆದು ಪರಭವಗೊಂಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಇಲ್ಲದಿರುವುದರಿಂದ ಕಾಂಗ್ರೆಸ್ ನಿಂದ ಒಬ್ಬರೇ ನಾಮಪತ್ರ ಸಲ್ಲಿಸಿದ ರಾಜವ್ವ ಹನುಮಪ್ಪ ಬಾದಾಮಿ ಅವಿರೋಧವಾಗಿ ಆಯ್ಕೆಯಾದರು.

ನಂತರ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜೊತೆಗೆ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದಿರುವುದರಿಂದ ಪಟ್ಟಣದ ಮೂಲ ಸೌಕರ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತಂದು ಸುಂದರವಾದ ಮಾದರಿಯ ಹುನಗುಂದ ಪಟ್ಟಣವನ್ನು ಮಾಡಲು ಸಂಕಲ್ಪ ಮಾಡುತ್ತೇನೆ. ಅಮೃತ ಯೋಜನೆ ಅಡಿಯಲ್ಲಿ ಹುನಗುಂದ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆಯ, 18 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಅನುಮೋದನೆ ಆಗಿದ್ದು, ರಸ್ತೆ, ಕುಡಿಯುವ ನೀರು ಮೂಲಭೂತ ಸೌಲಭ್ಯೆಗಳಿಗೆ ನಗೋರೋತ್ಥಾನ ಯೋಜನೆಯ ೪ನೇ ಹಂತದಲ್ಲಿ ಕಾಮಗಾರಿ ಆರಂಭವಾಗಿವೆ.

ಬಡವರಿಗೆ ಪುರಸಭೆಯ 24 ಎಕರೆಯಲ್ಲಿ ಗುರುತಿಸಿ 941 ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರದಿಂದ 500 ಮನೆ ನಿರ್ಮಾಣಕ್ಕೆ ಮಂಜುರಾತಿಯನ್ನು ನೀಡಿದ್ದು ಕೇವಲ 6 ತಿಂಗಳಲ್ಲಿ ಎಲ್ಲ ಬಡವರಿಗೆ ನಿರ್ಮಿಸಿ ಕೊಡಲಾಗುವುದು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪಟ್ಟಣದ ಜವಾಬ್ದಾರಿಯಿಂದ ಎಲ್ಲ ಸದಸ್ಯರ ವಿಶ್ವಾಸಕ್ಕೆ ತೆಗೆದಕೊಂಡು ಉತ್ತಮ ಆಡಳಿತವನ್ನು ನಡೆಸಬೇಕೆಂದು ಎಂದು ತಿಳಿಸಿದರು.

ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ನಂತರ ಹರ್ಷಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಿಹಿ ತಿನ್ನಿಸಿ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಮಾಜಿ ಅಧ್ಯಕ್ಷ ಶರಣು ಬೆಲ್ಲದ, ಪರವೇಜ್ ಖಾಜಿ ಉಪಾಧಕ್ಷರಾದ ಗುರುಬಾಯಿ ಹೂಗಾರ, ಶಾಂತಾ ಮೇಲಿನಮನಿ, ಸದಸ್ಯರಾದ ಮಹಮ್ಮದ ದೋಟಿಹಾಳ, ಬಸವರಾಜ ಗೋಣ್ಣಗರ, ಮೈನು ಧನ್ನೂರ, ಚಂದ್ರು ತಳವಾರ, ಯಲ್ಲಪ್ಪ ನಡುವಿನಮನಿ, ಕಮಲವ್ವ ಸಂದಿಮನಿ, ಶರಣಮ್ಮ ಮುಕ್ಕಣ್ಣವರ, ಖೈರುನಬಿ ನಾಯಕ, ಸಂಗಣ್ಣ ಗಂಜೀಹಾಳ, ಮುತ್ತಣ್ಣ ಕಲಗೋಡಿ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ರವಿ ಹುಚನೂರ, ಅಮರೇಶ ನಾಗೂರ, ಮೆಹಬೂಬ ಸರಕಾವಸ, ಜಬ್ಬಾರ ಕಲಬುರ್ಗಿ, ವಿಶ್ವನಾಥ ಬ್ಯಾಳಿ, ದೇವು ಡಂಬಳ,ಮಲ್ಲಣ್ಣ ಹೂಗಾರ, ಮುತ್ತು ಲೋಕಾಪೂರ, ಮಲ್ಲಣ್ಣ ಅಠರದಾನಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ:

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ನೇತೃತ್ವದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐಗಳಾದ ಚನ್ನಯ್ಯ ದೇವೂರ, ಎಸ್.ಆರ್.ನಾಯಕ ಅವರು ಪೋಲಿಸ್ ಬಾರಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪುರಸಭೆಯ ಎರಡು ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಸಿ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳು ನೇಮಿಸಿ ಚುನಾವಣೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಮಾತ್ರ ಪುರಸಭೆ ಒಳಗಡೆಗೆ ಅವಕಾಶ ನೀಡಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ