Big victory for Congress.. Another embarrassment for BJP

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಹುನಗುಂದ: ಇಳಕಲ್ ನಗರಸಭೆ, ಹುನಗುಂದ ಪಿಎಲ್ಡಿ ಬ್ಯಾಂಕ್ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಸೋಲಿಸಿ ರುಚಿ ತೋರಿಸುವಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಯಶಸ್ಸು ಕಂಡಿದ್ದಾರೆ.

ಹೌದು, ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ರಾಜವ್ವ ಹನಮಪ್ಪ ಬಾದಾಮಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.

Join Our Telegram: https://t.me/dcgkannada

ಪುರುಸಭೆಯ ಒಟ್ಟು 23 ಸದಸ್ಯರ ಬಲವುಳ್ಳ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಶ್ರೀ ರೇವಡಿ ಅವರು ಸ್ಪರ್ಧಿಸಿ ಕಾಂಗ್ರೆಸ್ 12 ಮತಗಳೊಂದಿಗೆ ಬಿಜೆಪಿಯ ಒಬ್ಬರು ಜೆಡಿಎಸ್ ನ ಇಬ್ಬರು ಸದಸ್ಯರು ಹಾಗೂ ಶಾಸಕರ ಒಂದು ಮತವು ಸೇರಿದಂತೆ ಒಟ್ಟು 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಬಿಜೆಪಿಯ ಬಸವ್ವ ಬಸಪ್ಪ ಚಿತ್ತಾವಾಡಗಿ ೮ ಮತಗಳನ್ನ ಪಡೆದು ಪರಭವಗೊಂಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಇಲ್ಲದಿರುವುದರಿಂದ ಕಾಂಗ್ರೆಸ್ ನಿಂದ ಒಬ್ಬರೇ ನಾಮಪತ್ರ ಸಲ್ಲಿಸಿದ ರಾಜವ್ವ ಹನುಮಪ್ಪ ಬಾದಾಮಿ ಅವಿರೋಧವಾಗಿ ಆಯ್ಕೆಯಾದರು.

ನಂತರ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜೊತೆಗೆ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದಿರುವುದರಿಂದ ಪಟ್ಟಣದ ಮೂಲ ಸೌಕರ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತಂದು ಸುಂದರವಾದ ಮಾದರಿಯ ಹುನಗುಂದ ಪಟ್ಟಣವನ್ನು ಮಾಡಲು ಸಂಕಲ್ಪ ಮಾಡುತ್ತೇನೆ. ಅಮೃತ ಯೋಜನೆ ಅಡಿಯಲ್ಲಿ ಹುನಗುಂದ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆಯ, 18 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಅನುಮೋದನೆ ಆಗಿದ್ದು, ರಸ್ತೆ, ಕುಡಿಯುವ ನೀರು ಮೂಲಭೂತ ಸೌಲಭ್ಯೆಗಳಿಗೆ ನಗೋರೋತ್ಥಾನ ಯೋಜನೆಯ ೪ನೇ ಹಂತದಲ್ಲಿ ಕಾಮಗಾರಿ ಆರಂಭವಾಗಿವೆ.

ಬಡವರಿಗೆ ಪುರಸಭೆಯ 24 ಎಕರೆಯಲ್ಲಿ ಗುರುತಿಸಿ 941 ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರದಿಂದ 500 ಮನೆ ನಿರ್ಮಾಣಕ್ಕೆ ಮಂಜುರಾತಿಯನ್ನು ನೀಡಿದ್ದು ಕೇವಲ 6 ತಿಂಗಳಲ್ಲಿ ಎಲ್ಲ ಬಡವರಿಗೆ ನಿರ್ಮಿಸಿ ಕೊಡಲಾಗುವುದು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪಟ್ಟಣದ ಜವಾಬ್ದಾರಿಯಿಂದ ಎಲ್ಲ ಸದಸ್ಯರ ವಿಶ್ವಾಸಕ್ಕೆ ತೆಗೆದಕೊಂಡು ಉತ್ತಮ ಆಡಳಿತವನ್ನು ನಡೆಸಬೇಕೆಂದು ಎಂದು ತಿಳಿಸಿದರು.

ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ನಂತರ ಹರ್ಷಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಿಹಿ ತಿನ್ನಿಸಿ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಮಾಜಿ ಅಧ್ಯಕ್ಷ ಶರಣು ಬೆಲ್ಲದ, ಪರವೇಜ್ ಖಾಜಿ ಉಪಾಧಕ್ಷರಾದ ಗುರುಬಾಯಿ ಹೂಗಾರ, ಶಾಂತಾ ಮೇಲಿನಮನಿ, ಸದಸ್ಯರಾದ ಮಹಮ್ಮದ ದೋಟಿಹಾಳ, ಬಸವರಾಜ ಗೋಣ್ಣಗರ, ಮೈನು ಧನ್ನೂರ, ಚಂದ್ರು ತಳವಾರ, ಯಲ್ಲಪ್ಪ ನಡುವಿನಮನಿ, ಕಮಲವ್ವ ಸಂದಿಮನಿ, ಶರಣಮ್ಮ ಮುಕ್ಕಣ್ಣವರ, ಖೈರುನಬಿ ನಾಯಕ, ಸಂಗಣ್ಣ ಗಂಜೀಹಾಳ, ಮುತ್ತಣ್ಣ ಕಲಗೋಡಿ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ರವಿ ಹುಚನೂರ, ಅಮರೇಶ ನಾಗೂರ, ಮೆಹಬೂಬ ಸರಕಾವಸ, ಜಬ್ಬಾರ ಕಲಬುರ್ಗಿ, ವಿಶ್ವನಾಥ ಬ್ಯಾಳಿ, ದೇವು ಡಂಬಳ,ಮಲ್ಲಣ್ಣ ಹೂಗಾರ, ಮುತ್ತು ಲೋಕಾಪೂರ, ಮಲ್ಲಣ್ಣ ಅಠರದಾನಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ:

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ನೇತೃತ್ವದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐಗಳಾದ ಚನ್ನಯ್ಯ ದೇವೂರ, ಎಸ್.ಆರ್.ನಾಯಕ ಅವರು ಪೋಲಿಸ್ ಬಾರಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪುರಸಭೆಯ ಎರಡು ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಸಿ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳು ನೇಮಿಸಿ ಚುನಾವಣೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಮಾತ್ರ ಪುರಸಭೆ ಒಳಗಡೆಗೆ ಅವಕಾಶ ನೀಡಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು