Festival: Hunagunda Sangameshwara fair on September 2

Festival: ಸೆ.2 ರಂದು ಹುನಗುಂದ ಸಂಗಮೇಶ್ವರ ಜಾತ್ರೆ.. ಶಾಂತಿ ಸಭೆಯಲ್ಲಿ PSI ಹೇಳಿದ್ದೇನು?

Festival: ಸೆ.2 ರಂದು ಹುನಗುಂದ ಸಂಗಮೇಶ್ವರ ಜಾತ್ರೆ.. ಶಾಂತಿ ಸಭೆಯಲ್ಲಿ PSI ಹೇಳಿದ್ದೇನು?

ಹುನಗುಂದ: ಸೆ.2 ರಂದು ನಡೆಯಲಿರುವ ಶ್ರೀ ಸಂಗಮೇಶ್ವರ ಜಾತ್ರೆಯಲ್ಲಿ ಯಾವುದೆ ಅಹಿತಕರ ಘಟನೆ ನಡೆಯದಂತೆ ಪಟ್ಟಣದ ಹಿರಿಯರು, ಯುವಕರು ಯಶಸ್ವಿಯಾಗಿ ಜಾತ್ರೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹುನಗುಂದ ಪಿಎಸ್‌ಐ ಚನ್ನಯ್ಯ ದೇವೂರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವದ ಮುನ್ನೆಚ್ಚರಿಕೆಯಾಗಿ ಮಂಗಳವಾರ ಕರೆದ ಪೂರ್ವಭಾವಿ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ ಸೇರಿದಂತೆ ದೇವಸ್ಥಾನದ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಪ್ರತಿ ವರ್ಷಕ್ಕಿಂತ ಒಂದು ಗಂಟೆ ಮುಂಚಿತವಾಗಿ ನಡೆಯಲಿವೆ.

ರಾಜ್ಯದ ಕೆಲವು ಕಡೆಗಳಲ್ಲಿ ಕಿಡಿಗೇಡಿಗಳಿಂದ ಅತಾಚುರ್ಯತೆಯಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ಭಕ್ತರಿಗೆ ತೊಂದರೆ ಯಾಗದಂತೆ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳನ್ನು ಹಾಕಿ ಪ್ರಮುಖ ಕಡೆಗಳಲ್ಲಿ ಸಿಸಿ ಟಿವಿ ಅಳವಡಿಸಿ ಇಲಾಖೆ ಕಟ್ಟೆಚ್ಚರ ವಹಿಸುತ್ತಿದೆ. ಜಾತ್ರೆಯ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕೆಂದು ತಿಳಿಸಿದರು.

ದೇವಸ್ಥಾನ ಕಮೀಟಿ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಮಾತನಾಡಿದರು.

ಮುಖಂಡ ಮಹಾಂತೇಶ ಅವಾರಿ, ರವಿ ಹುಚನೂರ, ಮಹೇಶ ಬೆಳ್ಳಿಹಾಳ, ಜಬ್ಬಾರ ಕಲಬುರ್ಗಿ, ರಾಮನಗೌಡ ಬೆಳ್ಳಿಹಾಳ ಮಾತನಾಡಿದರು. ಹನಮಂತಪ್ಪ ನಕನಡೋಣ , ಮಲ್ಲು ಚೂರಿ, ಗಿರಿಮಲ್ಲಪ್ಪ ಹಳಪೇಟಿ, ಶಾಂತಪ್ಪ ಹೊಸಮನಿ, ಮಹಾಂತೇಶ ಮುಕ್ಕಣ್ಣವರ, ಮಲ್ಲು ಅಂಟರತಾನಿ, ಈಶಪ್ಪ ಹವಾಲ್ದಾರ, ಮುನ್ನಾ ಭಾಗವಾನ, ದಾನಪ್ಪ ಕೆಂದೂರ ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ