Natimani has revealed the story of sexual assault

ಲೈವ್ ನಲ್ಲಿ ಕಣ್ಣೀರಿಟ್ಟ ನಟಿ.. ಲೈಂಗಿಕ ದೌರ್ಜನ್ಯದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟ ನಟಿಮಣಿ (ವಿಡಿಯೋ ನೋಡಿ)

ಲೈವ್ ನಲ್ಲಿ ಕಣ್ಣೀರಿಟ್ಟ ನಟಿ.. ಲೈಂಗಿಕ ದೌರ್ಜನ್ಯದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟ ನಟಿಮಣಿ (ವಿಡಿಯೋ ನೋಡಿ)

ಹೈದರಾಬಾದ್:‌‌ ಹೇಮಾ ಸಮಿತಿ ವರದಿ (Hema Committee Report) ಬಂದ ನಂತರ ಮಾಲಿವುಡ್‌(Molly wood) ಸಿನಿಮಾರಂಗದಲ್ಲಿ ಒಂದೊಂದೇ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬರುತ್ತಿರುವುದು ಗಮನಾರ್ಹ ಸಂಗತಿ.

ಹೌದು, ಇದೀಗ ಆಂಧ್ರ ಪ್ರದೇಶದ ರಾಜಕಾರಣಿಯೊಬ್ಬರ ಮೇಲೆ ನಟಿಯೊಬ್ಬರು ಮಾಡಿರುವ ಲೈಂಗಿಕ, ಮಾನಸಿಕ ಹಿಂಸೆಯ ಆರೋಪ ಆಂದ್ರಪ್ರದೇಶದ ರಾಜಕೀಯ ಹಾಗೂ ಸಿನಿರಂಗದಲ್ಲೂ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕಾದಂಬರಿ ಜೇತ್ವಾನಿ (Actress Kadambari Jetwani) ಬಣ್ಣದ ಲೋಕ್ಕೆ ಕಾಲಿಡುವ ಮುನ್ನ ಮುಂಬೈನಲ್ಲಿ ಮಾಡೆಲ್‌ ಆಗಿದ್ದರು. 2012ರಲ್ಲಿ ಬಂದ ʼಸಡ್ಡಾ ಅಡ್ಡಾʼ ಸಿನಿಮಾದಲ್ಲಿ ಕಾಣಿಸಿಕೊಂಡ ಬಳಿಕ 2015ರಲ್ಲಿ ಬಂದ ‘ಯೂಜಾ’ ಎನ್ನುವ ತೆಲುಗು ಚಿತ್ರಕ್ಕೆ ನಾಯಕಿಯಾಗಿಯೂ ಆಯ್ಕೆ ಆಗಿದ್ದರು.

ಹೀಗೆ, ಬಣ್ಣದ ಲೋಕದಲ್ಲಿ ತನ್ನ ಮೋಹಕ ಅಂದದಿಂದ ಗಮನ ಸೆಳೆದಿದ್ದ ಕಾದಂಬರಿ ಜೇತ್ವಾನಿ ತೆಲುಗಿನ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಇತ್ತೀಚೆಗೆ ಲೈವ್‌ನಲ್ಲಿ ಮಾತನಾಡುತ್ತಾ ಕಣ್ಣೀರಿಟ್ಟರು.

ಅಲ್ಲದೆ, ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ(Jagan Mohan Reddy ) ಅವರ ವೈಎಸ್‌ಆರ್‌ಸಿಪಿ(YSCRP) ಪಕ್ಷದ ನಾಯಕನೊಬ್ಬನ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪ ಆಂಧ್ರದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.

ವಿಜಯವಾಡದ ಜಿಪಂ ಮಾಜಿ ಅಧ್ಯಕ್ಷ ಕುಕ್ಕಲ ನಾಗೇಶ್ವರ ರಾವ್ ಅವರ ಮಗ ವೈಎಸ್‌ಆರ್‌ಸಿಪಿ ನಾಯಕ ಕುಕ್ಕಲ ವಿದ್ಯಾಸಾಗರ್‌ (Kukkala Vidya Sagar) ಎಂಬಾತ ಪ್ರತಿದಿನ ನನಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸುತ್ತಿದ್ದನು. ವಾಟ್ಸಾಪ್ ನಲ್ಲಿ ಕರೆ ಮಾಡಿ ಬೆತ್ತಲೆಯಾಗಿ ನಿಂತು ಸೆಲ್ಫಿ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದನು. ಅಂದಿನ ಆಂಧ್ರ ಸರ್ಕಾರದ ಪ್ರಬಲ ನಾಯಕರು, ಉನ್ನತ ಪೊಲೀಸ್ ಅಧಿಕಾರಿಗಳ ಗ್ಯಾಂಗ್ ಹಣ ಹಾಗೂ ಅಧಿಕಾರವನ್ನು ಬಳಸಿಕೊಂಡು ನನಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆಂಧ್ರ ಸರ್ಕಾರದ ಆದೇಶದ ಮೇರೆಗೆ ಅದೊಂದು ದಿನ ಮುಂಬೈನಲ್ಲಿನ ನನ್ನ ಮನೆಗೆ ಆಂಧ್ರ ಪೊಲೀಸರು ದಾಳಿ ಮಾಡಿದ್ದರು. ನನ್ನನ್ನು ಅಪಹರಿಸಿ, ನನ್ನ ತಂದೆ – ತಾಯಿಯನ್ನು ಜೈಲಿಗಟ್ಟಿದ್ದರು. ಜೈಲಿನಲ್ಲಿ ನೀಡಿದ ಚಿತ್ರಹಿಂಸೆಯಿಂದಾಗಿ ನನ್ನ ತಂದೆಗೆ ಕಿವಿ ಕೇಳಿಸದಂತೆ ಆಯಿತು. ನನ್ನ ತಾಯಿಗೆ ಹೃದಯದ ಸಮಸ್ಯೆಯಾಯಿತು ಎಂದೂ ಆರೋಪಿಸಿದ್ದಾರೆ.

ಆರು ತಿಂಗಳಿಂದ ಯಾರೊಂದಿಗೂ ಮಾತನಾಡಲಿಲ್ಲ. ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಮುಂಬೈನಲ್ಲಿ ನನ್ನನ್ನು ಅಪಹರಿಸಿ ವಿಜಯವಾಡಕ್ಕೆ ಕರೆತರಲಾಯಿತು. ನನ್ನ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನನ್ನ ಪೋಷಕರ ಫೋನ್ ವಶಪಡಿಸಿಕೊಳ್ಳಲಾಗಿದೆ. ಅವರು ನನ್ನ ಸಂಬಂಧಿಕರಿಗೆ ಬೆದರಿಕೆ ಹಾಕಿದರು ಎಂದು ಅವರು ಹೇಳಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ನನ್ನ ಮೇಲೆ ದೂರು ದಾಖಲಿಸಿ ಸುಮಾರು 45 ದಿನಗಳ ಕಾಲ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ. ಈ ಕಾಲದಲ್ಲಿಯೂ ಮಹಿಳೆಗೆ ಈ ರೀತಿಯಾದರೆ ಮಹಿಳೆಯರಿಗೆ ಸ್ವಾತಂತ್ರ್ಯ ಎಲ್ಲಿದೆ ಎಂದು ಕಣ್ಣೀರಿಟ್ಟಿದ್ದಾರೆ.

ವಿದ್ಯಾ ಸಾಗರ್‌ ಪರಿಚಯವಾದದ್ದು ಹೇಗೆ?

ನನ್ನ ಮೇಲೆ ಸುಳ್ಳ ಆರೋಪ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ನನ್ನನ್ನು ಜೈಲಿಗಟ್ಟಿದ ಈತ ನನ್ನ ಸ್ನೇಹಿತವೆಂದು ಹೇಳಿಕೊಂಡು 2009ರಿಂದ ಪರಿಚಯವಾಗಿದ್ದ. ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಾ, ಒಳ್ಳೆಯದನ್ನು ಬಯಸುತ್ತಾ ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ. ಈತ ನನ್ನ ಜೀವನದಲ್ಲಿ ಹೇಗೆಲ್ಲಾ ಮಾಡುತ್ತಾನೆ ಅಂಥ ನಾನು ಕಲ್ಪನೆಯೂ ಮಾಡಿಕೊಂಡಿರಲಿಲ್ಲ. ಅವನ ಒಳ್ಳೆಯತನದ ಹಿಂದೆ ಒಂದು ಕೆಟ್ಟ ಉದ್ದೇಶವಿತ್ತು ಎಂದು ನಟಿ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಜೈಲಿನಿಂದ ಹೊರಬಂದಿದ್ದೇನೆ. ಅವರು ನಮ್ಮ ಜೀವನಕ್ಕೆ ದೇವರಂತೆ ಬಂದರು ಎಂದು ಅವರು ಚಂದ್ರಬಾಬು ನಾಯ್ಡು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸದ್ಯ ನಟಿಯ ಈ ಆರೋಪ ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಆರೋಪಿ ವಿದ್ಯಾ ಸಾಗರ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.